ಸಿಸಿ ಪಾಟೀಲ್ 
ರಾಜ್ಯ

ಭಾರೀ ಟೀಕೆಗಳ ಬಳಿಕ ಪ್ರವಾಹ ಪೀಡಿತ ಗದಗಕ್ಕೆ ಸಚಿವ ಸಿಸಿ ಪಾಟೀಲ್ ಭೇಟಿ

ಟೀಕೆಗಳ ಕುರಿತ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಅವರು ಪ್ರವಾಹ ಪೀಡಿತ ಗದಗ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದರು. 

ಗದಗ: ಟೀಕೆಗಳ ಕುರಿತ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಅವರು ಪ್ರವಾಹ ಪೀಡಿತ ಗದಗ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದರು. 

ಗದಗ ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು ಜನರ ಸಮಸ್ಯೆಗಳನ್ನು ಆಲಿಸಿದರು. ಪ್ರವಾಹ ಪೀಡಿತರ ಸಮಸ್ಯೆ ಪರಿಸಲು ಸರ್ಕಾರ ದೊಡ್ಡ ಮೊತ್ತದ ಪರಿಹಾರವನ್ನು ವ್ಯಯಿಸುತ್ತಿದೆ. ನೆರೆ ಪೀಡಿತ ಪ್ರದೇಶಗಳಿಗೆ ಸರ್ಕಾರ ಎಷ್ಟು ಹಣವನ್ನು ಖರ್ಚು ಮಾಡುತ್ತಿದೆ ಎಂಬುದು ನಿಮಗೇ ಗೊತ್ತಿದೆ ಎಂದು ಜನರೊಂದಿಗೆ ಮಾತುಕತೆ ನಡೆಸಿದ್ದಾರೆ. 

ಶಾಸಕರೂ ಕೂಡ ಹಣವನ್ನು ಪಡೆಯದೆಯೇ ಅದನ್ನೂ ನೆರೆ ಪೀಡಿತರಿಗೆ ನೀಡುತ್ತಿದ್ದಾರೆ. ಗ್ರಾಮಸ್ಥರ ಸ್ಥಳಾಂತರ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸ್ಥಳಾಂತರವಾಗುವುದೇ ಆದರೆ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ರೋಣ ತಾಲೂಕಿನ ಹೊಳೆಆಲೂರು ಪಟ್ಟಣಕ್ಕೆ ಸಚಿವರು ಭೇಟಿ ನೀಡಿದ್ದು, ಈ ವೇಳೆ ಮಹಿಳೆಯೊಬ್ಬರು ಸಚಿವನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. 

ಇಷ್ಟಿ ದಿನ ಎಲ್ಲಿ ಹೋಗಿದ್ರಿ? ಈಗೇರೆ ಬಂದಿದ್ದೀರಿ ಎಂದು ಸಚಿವರನ್ನು ಮಹಿಳೆ ಪ್ರಶ್ನಿಸಿದ್ದಾರೆ. ಇದಕ್ಕೆ ಗರಂ ಆದ ಸಚಿವರು, ಯಾರೋ ಹೇಳಿಕೊಟ್ಟಂತೆ ಮಾತನಾಡ ಬೇಡಿ. ರಸ್ತೆ ದುರಸ್ತಿ, ಮನೆ ದುರಸ್ತಿ ಆಮೇಲೆ ನೋಡುತ್ತೇವೆ. ಒಂದು ಬುಟ್ಟಿ ಮಣ್ಣು ಹಾಕಲಿಕ್ಕೂ ಸರ್ಕಾರದಲ್ಲಿ ಹಣವಿಲ್ಲ ಎಂದು ತಿಳಿಸಿದ್ದಾರೆ. 

ಬಳಿಕ ಮಹಿಳೆ ತಮ್ಮ ಅಸಮಾಧಾನವನ್ನು ಮುಂದುವರೆಸುತ್ತಿದ್ದ ಹಿನ್ನಲೆಯಲ್ಲಿ ನಾನು ಬೆಂಗಳೂರಿಗೆ ಹೋಗಬೇಕು. ಫ್ಲೈಟ್ ಮಿಸ್ ಇಗುತ್ತದೆ. ಸಮಯವಿಲ್ಲ ಬೇಗ ಹೋಗಬೇಕೆಂದು ಹೇಳಿದರು. ಈ ವೇಳೆ ಕೋಪಗೊಂಡ ಮಹಿಳೆ, ಸಮಯವಿಲ್ಲದಿದ್ದರೆ, ಬೆಂಗಳೂರಿನಲ್ಲೇ ಕುಳಿತು ಮಾತನಾಡ, ನಾವು ಟಿವಿಯಲ್ಲಿಯೇ ನೋಡುತ್ತೇವೆ. ಇಲ್ಲಿಗೇಕೆ ಬಂದಿರಿ ಎಂದರು. ಬಳಿಕ ಸಚಿವರು ಪಟ್ಟಣದಿಂದ ಕಾಲ್ಕಿತ್ತರು ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT