ಸೆರೆಯಾದ ಪುಂಡಾನೆ 
ರಾಜ್ಯ

ಗುಂಡ್ಲುಪೇಟೆ: ರೈತರನ್ನು ಗಾಯಗೊಳಿಸಿದ್ದ ಪುಂಡಾನೆ ಸೆರೆ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ದಸರಾ ಆನೆ ಯಾದ ಅಭಿಮನ್ಯು ಹಾಗೂ ಇನ್ನಿತರ ಆನೆಗಳ ಸಹಾಯದಿಂದ ಕೊನೆಗೂ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಹಾಗೂ ಕಲ್ಲಟ್ಟಿ ಗ್ರಾಮದ ನಡುವೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಜನರಿಗೆ ಉಪಟಳ ನೀಡುತ್ತಿದ್ದ ಈ ಆನೆ ತಮಿಳುನಾಡಿನಿಂದ ಕರ್ನಾಟಕ ಅರಣ್ಯ ಪ್ರದೇಶಕ್ಕೆ ಬಂದಿತ್ತು. ಕಳೆದ ಮೂರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಪುಂಡಾನೆ ಸೆರೆಯಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. 

ಸೆರೆಯಾದ ಪುಂಡಾನೆಯನ್ನು ಮತ್ತೊಂದು ಆನೆ ಎಳೆದೊಯ್ಯುತ್ತಿರುವುದು.

ಸೆರೆ ಹಿಡಿದ ಪುಂಡಾನೆಯನ್ನು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದು, ಅದನ್ನು ಪಳಗಿಸಲಾಗುವುದೆಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದ‍ಾರೆ.

ವರದಿ: ಗೂಳಿಪುರ ನಂದೀಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT