ಸೆರೆಯಾದ ಪುಂಡಾನೆ 
ರಾಜ್ಯ

ಗುಂಡ್ಲುಪೇಟೆ: ರೈತರನ್ನು ಗಾಯಗೊಳಿಸಿದ್ದ ಪುಂಡಾನೆ ಸೆರೆ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ದಸರಾ ಆನೆ ಯಾದ ಅಭಿಮನ್ಯು ಹಾಗೂ ಇನ್ನಿತರ ಆನೆಗಳ ಸಹಾಯದಿಂದ ಕೊನೆಗೂ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಹಾಗೂ ಕಲ್ಲಟ್ಟಿ ಗ್ರಾಮದ ನಡುವೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಜನರಿಗೆ ಉಪಟಳ ನೀಡುತ್ತಿದ್ದ ಈ ಆನೆ ತಮಿಳುನಾಡಿನಿಂದ ಕರ್ನಾಟಕ ಅರಣ್ಯ ಪ್ರದೇಶಕ್ಕೆ ಬಂದಿತ್ತು. ಕಳೆದ ಮೂರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಪುಂಡಾನೆ ಸೆರೆಯಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. 

ಸೆರೆಯಾದ ಪುಂಡಾನೆಯನ್ನು ಮತ್ತೊಂದು ಆನೆ ಎಳೆದೊಯ್ಯುತ್ತಿರುವುದು.

ಸೆರೆ ಹಿಡಿದ ಪುಂಡಾನೆಯನ್ನು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದು, ಅದನ್ನು ಪಳಗಿಸಲಾಗುವುದೆಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದ‍ಾರೆ.

ವರದಿ: ಗೂಳಿಪುರ ನಂದೀಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT