ಸೆರೆಯಾದ ಪುಂಡಾನೆ 
ರಾಜ್ಯ

ಗುಂಡ್ಲುಪೇಟೆ: ರೈತರನ್ನು ಗಾಯಗೊಳಿಸಿದ್ದ ಪುಂಡಾನೆ ಸೆರೆ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಾಗೂ ಹಂಗಳ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಜಾನುವಾರಗಳನ್ನು ಬಲಿ ತೆಗೆದುಕೊಂಡು ಇಬ್ಬರು ರೈತರನ್ನು ಗಾಯಗೊಳಿಸಿದ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ದಸರಾ ಆನೆ ಯಾದ ಅಭಿಮನ್ಯು ಹಾಗೂ ಇನ್ನಿತರ ಆನೆಗಳ ಸಹಾಯದಿಂದ ಕೊನೆಗೂ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಹಾಗೂ ಕಲ್ಲಟ್ಟಿ ಗ್ರಾಮದ ನಡುವೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಜನರಿಗೆ ಉಪಟಳ ನೀಡುತ್ತಿದ್ದ ಈ ಆನೆ ತಮಿಳುನಾಡಿನಿಂದ ಕರ್ನಾಟಕ ಅರಣ್ಯ ಪ್ರದೇಶಕ್ಕೆ ಬಂದಿತ್ತು. ಕಳೆದ ಮೂರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಪುಂಡಾನೆ ಸೆರೆಯಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. 

ಸೆರೆಯಾದ ಪುಂಡಾನೆಯನ್ನು ಮತ್ತೊಂದು ಆನೆ ಎಳೆದೊಯ್ಯುತ್ತಿರುವುದು.

ಸೆರೆ ಹಿಡಿದ ಪುಂಡಾನೆಯನ್ನು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದು, ಅದನ್ನು ಪಳಗಿಸಲಾಗುವುದೆಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದ‍ಾರೆ.

ವರದಿ: ಗೂಳಿಪುರ ನಂದೀಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT