ಬಿವೈ ರಾಘವೇಂದ್ರ 
ರಾಜ್ಯ

ಮಂಗ, ಕಾಡು ಪ್ರಾಣಿಗಳನ್ನು ಮನೆಯಲ್ಲೇ ಇಟ್ಟುಕೊಳ್ಳಲಿ: ಬಿ.ವೈ. ರಾಘವೇಂದ್ರ ಹೇಳಿಕೆಗೆ ಪರಿಸರವಾದಿಗಳ ವಿರೋಧ

ಕಾಡು ಪ್ರಾಣಿಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ವನ್ಯಜೀವಿ ಹೋರಾಟಗಾರರು ತಮ್ಮ ತಮ್ಮ ಮನೆಗಳಲ್ಲಿಯೇ ಮಂಗಗಳು ಕಾಡುಪ್ರಾಣಿಗಳನ್ನು ಇಟ್ಟುಕೊಳ್ಳಲಿ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ. 

ಶಿವಮೊಗ್ಗ: ಕಾಡು ಪ್ರಾಣಿಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ವನ್ಯಜೀವಿ ಹೋರಾಟಗಾರರು ತಮ್ಮ ತಮ್ಮ ಮನೆಗಳಲ್ಲಿಯೇ ಮಂಗಗಳು ಕಾಡುಪ್ರಾಣಿಗಳನ್ನು ಇಟ್ಟುಕೊಳ್ಳಲಿ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮಳೆಹಾನಿ ಕುರಿತು ಪರಿಶೀಲನೆ ನಡೆಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಹೋರಾಟಗಾರರು ಮಂಕಿ ಪಾರ್ಕ್'ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪರಿಸರವನ್ನು ರಕ್ಷಣೆ ಮಾಡುವುದು ಮುಖ್ಯವಾದದ್ದು ನಿಜ. ಆದರೆ, ರೈತರ ಹಿತಾಸಕ್ತಿಯನ್ನೂ ನೋಡಬೇಕು. ಕಾಡು ಪ್ರಾಣಿಗಳು ರೈತರಿಗೆ ಸಮಸ್ಯೆಯನ್ನುಂಟು ಮಾಡುತ್ತಿವೆ ಎಂದು ಅರಣ್ಯಾಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಕಾಡು ಪ್ರಾಣಿಗಳನ್ನು ಝೂನಲ್ಲಿ ಇಡಬೇಕಿದೆ. ಕಾಡು ಪ್ರಾಣಿಗಳ ಮೇಲೆ ವನ್ಯಜೀವಿ ಹೋರಾಟಗಾರರಿಗೆ ಅಷ್ಟೊಂದು ಪ್ರೀತಿ ಇದ್ದರೆ, ಮಂಗ, ಕಾಡನೆ ಹಾಗೂ ಕಾಡು ಪ್ರಾಣಿಗಳನ್ನು ತಮ್ಮ ಮನೆಯಲ್ಲಿಯೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ. 

ರಾಘವೇಂದ್ರ ಅವರ ಹೇಳಿಕೆಗೆ ವನ್ಯಜೀವಿ ಹೋರಾಟಗಾರ ಅಖಿಲೇಶ್ ಚಿಪ್ಲಿ ಎಂಬುವವರು ಪ್ರತಿಕ್ರಿಯೆ ನೀಡಿದ್ದು, ಕಾಡು ಪ್ರಾಣಿಗಳನ್ನು ದತ್ತು ಪಡೆದುಕೊಳ್ಳಲು ಪರಿಸರ ಹೋರಾಟಗಾರರು ಸಿದ್ಧರಿದ್ದೇವೆ. ಇದಕ್ಕೆ ಸರ್ಕಾರ ಅನುಮತಿ ನೀಡಲಿ. ಸಂಸದರು ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಮಂಕಿ ಪಾರ್ಕ್ ಉತ್ತಮ ಆಲೋಚನೆಯಲ್ಲ ಎಂದು ಹೇಳಿದ್ದಾರೆ. 

ಕಾಡುಗಳಲ್ಲಿ ಆಹಾರ ಸಂಪನ್ಮೂಲಗಳು ಕ್ಷೀಮಿಸಿದಾಗ ಕೋತಿಗಳು ಮಾನವ ಆವಾಸಸ್ಥಾನಗಳಿಗೆ ವಲಸೆ ಹೋಗುತ್ತವೆ. ಶೆಟ್ಟಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರಭಾವಿ ರಾಜಕಾರಣಿಗಳು ಶೈಕ್ಷಣಿಕ ಸಂಸ್ಥೆಗಳನ್ನು ನಿರ್ಮಾಣ ಮಾಡಿವೆ. ಕೃಷಿಗಾಗಿ ಬಳಕೆ ಮಾಡಿದ್ದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಕೋತಿಗಳ ಆವಾಸಸ್ಥಾನಗಳು ಕ್ಷೀಣಿಸುತ್ತಿವೆ. ಹೀಗಾಗಿ ಆಹಾರ ಅರಸಿ ಮಾನವನ ಆವಾಸಸ್ಥಾನಗಳಿಗೆ ಬರುತ್ತಿವೆ ಎಂದು ಮತ್ತೊಬ್ಬ ಹೋರಾಟಗಾರ ಅಜಯ್ ಕುಮಾರ್ ಶರ್ಮಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO