ಬಿವೈ ರಾಘವೇಂದ್ರ 
ರಾಜ್ಯ

ಮಂಗ, ಕಾಡು ಪ್ರಾಣಿಗಳನ್ನು ಮನೆಯಲ್ಲೇ ಇಟ್ಟುಕೊಳ್ಳಲಿ: ಬಿ.ವೈ. ರಾಘವೇಂದ್ರ ಹೇಳಿಕೆಗೆ ಪರಿಸರವಾದಿಗಳ ವಿರೋಧ

ಕಾಡು ಪ್ರಾಣಿಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ವನ್ಯಜೀವಿ ಹೋರಾಟಗಾರರು ತಮ್ಮ ತಮ್ಮ ಮನೆಗಳಲ್ಲಿಯೇ ಮಂಗಗಳು ಕಾಡುಪ್ರಾಣಿಗಳನ್ನು ಇಟ್ಟುಕೊಳ್ಳಲಿ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ. 

ಶಿವಮೊಗ್ಗ: ಕಾಡು ಪ್ರಾಣಿಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ, ವನ್ಯಜೀವಿ ಹೋರಾಟಗಾರರು ತಮ್ಮ ತಮ್ಮ ಮನೆಗಳಲ್ಲಿಯೇ ಮಂಗಗಳು ಕಾಡುಪ್ರಾಣಿಗಳನ್ನು ಇಟ್ಟುಕೊಳ್ಳಲಿ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮಳೆಹಾನಿ ಕುರಿತು ಪರಿಶೀಲನೆ ನಡೆಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಹೋರಾಟಗಾರರು ಮಂಕಿ ಪಾರ್ಕ್'ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪರಿಸರವನ್ನು ರಕ್ಷಣೆ ಮಾಡುವುದು ಮುಖ್ಯವಾದದ್ದು ನಿಜ. ಆದರೆ, ರೈತರ ಹಿತಾಸಕ್ತಿಯನ್ನೂ ನೋಡಬೇಕು. ಕಾಡು ಪ್ರಾಣಿಗಳು ರೈತರಿಗೆ ಸಮಸ್ಯೆಯನ್ನುಂಟು ಮಾಡುತ್ತಿವೆ ಎಂದು ಅರಣ್ಯಾಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಕಾಡು ಪ್ರಾಣಿಗಳನ್ನು ಝೂನಲ್ಲಿ ಇಡಬೇಕಿದೆ. ಕಾಡು ಪ್ರಾಣಿಗಳ ಮೇಲೆ ವನ್ಯಜೀವಿ ಹೋರಾಟಗಾರರಿಗೆ ಅಷ್ಟೊಂದು ಪ್ರೀತಿ ಇದ್ದರೆ, ಮಂಗ, ಕಾಡನೆ ಹಾಗೂ ಕಾಡು ಪ್ರಾಣಿಗಳನ್ನು ತಮ್ಮ ಮನೆಯಲ್ಲಿಯೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ. 

ರಾಘವೇಂದ್ರ ಅವರ ಹೇಳಿಕೆಗೆ ವನ್ಯಜೀವಿ ಹೋರಾಟಗಾರ ಅಖಿಲೇಶ್ ಚಿಪ್ಲಿ ಎಂಬುವವರು ಪ್ರತಿಕ್ರಿಯೆ ನೀಡಿದ್ದು, ಕಾಡು ಪ್ರಾಣಿಗಳನ್ನು ದತ್ತು ಪಡೆದುಕೊಳ್ಳಲು ಪರಿಸರ ಹೋರಾಟಗಾರರು ಸಿದ್ಧರಿದ್ದೇವೆ. ಇದಕ್ಕೆ ಸರ್ಕಾರ ಅನುಮತಿ ನೀಡಲಿ. ಸಂಸದರು ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಮಂಕಿ ಪಾರ್ಕ್ ಉತ್ತಮ ಆಲೋಚನೆಯಲ್ಲ ಎಂದು ಹೇಳಿದ್ದಾರೆ. 

ಕಾಡುಗಳಲ್ಲಿ ಆಹಾರ ಸಂಪನ್ಮೂಲಗಳು ಕ್ಷೀಮಿಸಿದಾಗ ಕೋತಿಗಳು ಮಾನವ ಆವಾಸಸ್ಥಾನಗಳಿಗೆ ವಲಸೆ ಹೋಗುತ್ತವೆ. ಶೆಟ್ಟಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರಭಾವಿ ರಾಜಕಾರಣಿಗಳು ಶೈಕ್ಷಣಿಕ ಸಂಸ್ಥೆಗಳನ್ನು ನಿರ್ಮಾಣ ಮಾಡಿವೆ. ಕೃಷಿಗಾಗಿ ಬಳಕೆ ಮಾಡಿದ್ದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಕೋತಿಗಳ ಆವಾಸಸ್ಥಾನಗಳು ಕ್ಷೀಣಿಸುತ್ತಿವೆ. ಹೀಗಾಗಿ ಆಹಾರ ಅರಸಿ ಮಾನವನ ಆವಾಸಸ್ಥಾನಗಳಿಗೆ ಬರುತ್ತಿವೆ ಎಂದು ಮತ್ತೊಬ್ಬ ಹೋರಾಟಗಾರ ಅಜಯ್ ಕುಮಾರ್ ಶರ್ಮಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT