ಅಯ್ಯಪ್ಪ ದೊರೆ 
ರಾಜ್ಯ

ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ 7 ಮಂದಿ ಸೆರೆ; ಬಂಧಿತರ ಸಂಖ್ಯೆ 10ಕ್ಕೇರಿಕೆ

 ಅಲಯೆನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಉತ್ತರ ವಿಭಾಗದ ಪೊಲೀಸರು, ಮತ್ತೆ 7 ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೇರಿದೆ.

ಬೆಂಗಳೂರು:  ಅಲಯೆನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಉತ್ತರ ವಿಭಾಗದ ಪೊಲೀಸರು, ಮತ್ತೆ 7 ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೇರಿದೆ.

ಕೊಲೆ ಸಂಬಂಧ ನಾಲ್ವರು ಹಾಗೂ ಅದಕ್ಕೆ ಸಹಕರಿಸಿದ ಮೂವರು ಸೇರಿ ಒಟ್ಟು 7 ಮಂದಿಯನ್ನು ಆರ್.ಟಿ. ನಗರದ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಜಯಮಹಲ್‌ನ ಕಾಂತರಾಜು ಅಲಿಯಾಸ್ ಕಾಟಪ್ಪ (28), ಜೆಸಿ ನಗರದ ಸುನಿಲ್ ರಾವ್ ಅಲಿಯಾಸ್ ಅಪ್ಪು (31), ಆರ್.ಟಿ. ನಗರದ ಫಯಾಜ್ (29), ಜೆ.ಸಿ. ನಗರದ ವಿನಯ್ (24), ಆರ್.ಟಿ. ನಗರದ ಅರುಣ್ ಕುಮಾರ್, ಕನಕನಗರದ ರಿಜ್ವಾನ್ (38), ಕೊಡಿಗೆಹಳ್ಳಿಯ ಸಲ್ಮಾ (28) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಲ್ಲಿ ಕಾಂತರಾಜು, ಸುನಿಲ್ ರಾವ್, ಫಯಾಜ್ ಹಾಗೂ ವಿನಯ್ ಅವರು, ಅಯ್ಯಪ್ಪ ದೊರೆ ಕೊಲೆ ಕೃತ್ಯದಲ್ಲಿ ಪ್ರಮುಖ ಆರೋಪಿ ಸೂರಜ್ ಸಿಂಗ್ ಜೊತೆ ಕೈಜೋಡಿಸಿದ್ದರು. ಕೊಲೆ ಕೃತ್ಯಕ್ಕೆ ಅರುಣ್ ಕುಮಾರ್, ರಿಜ್ವಾನ್ ಹಾಗೂ ಸಲ್ಮಾ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿರುವುದು ತನಿಖೆಯಲ್ಲಿ ಕಂಡುಬಂದಿರುವುದರಿಂದ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ. 

ಇಲ್ಲಿಯವರೆಗೆ ಅಯ್ಯಪ್ಪ ಕೊಲೆ ಕೃತ್ಯದಲ್ಲಿ ಅಲಯನ್ಸ್ ವಿವಿಯ ಕುಲಪತಿ ಸುಧೀರ್ ಅಂಗೂರ್, ಸೂರಜ್ ಸಿಂಗ್ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

ಅಯ್ಯಪ್ಪ ಕೊಲೆ ಕೃತ್ಯದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದ್ದು, ಅಲಯೆನ್ಸ್ ವಿವಿಯ ಮೇಲಿನ ಹಿಡಿತ ಸಾಧಿಸಲು ಅಯ್ಯಪ್ಪ ದೊರೆ ಅವರ ಕೊಲೆ ನಡೆಸಿರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದರು.
ಕೊಲೆ ಕೃತ್ಯದ ಬೆನ್ನುಹತ್ತಿದ ಆರ್.ಟಿ. ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಮಿಥುನ್ ಶಿಲ್ಪಿ, ಓರ್ವ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ್ದಲ್ಲದೆ, ಉಳಿದವರನ್ನು ದಸ್ತಗಿರಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT