ಅನರ್ಹ ಶಾಸಕರು 
ರಾಜ್ಯ

ಮಹಾರಾಷ್ಟ್ರ, ಹರಿಯಾಣದಲ್ಲಿ ಪಕ್ಷಾಂತರಿಗಳ ಸೋಲು: ಅನರ್ಹ ಶಾಸಕರ ಪಾಳಯದಲ್ಲಿ ತಳಮಳ

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಇದೀಗ ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. 

ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಇದೀಗ ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. 

ಮುಂಬರುವ ಉಪಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯನ್ನೇರಿ ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಅನರ್ಹ ಶಾಸಕರಿಗೆ ಈ ಫಲಿತಾಂಶ ತುಸು ಚಿಂತೆಗೀಡು ಮಾಡಿದೆ. 

ತಮ್ಮ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿನ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದು ಹೊರಬಂದಾಯ್ತು, ಅದಕ್ಕಾಗಿ ಶಾಸಕತ್ವವನ್ನೂ ಕಳೆದುಕೊಂಡಿದ್ದಾಯ್ತು. ಆದರೆ, ಕಳೆದ 3 ತಿಂಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗದೆ ಈಗ ಒಂದು ತಾರ್ಕಿತ ಅಂತ್ಯ ಕಾಣುವ ಸಂದರ್ಭ ಬಂದೊದಗಿದೆ. 

ಇಷ್ಟೆಲ್ಲಾ ಕಷ್ಟನಷ್ಟ ಅನುಭವಿಸಿದರೂ ಮುಂದೆ ಒಳ್ಳೆಯದಾಗಲಿದೆ. ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಕನಸು ಕಾಣುತ್ತಿದ್ದ ಅನರ್ಹ ಶಾಸಕರಿಗೆ ಗುರುವಾರ ಹೊರಬಿದ್ದ ಎರಡು ರಾಜ್ಯಗಳ ಫಲಿತಾಂಶ ನಿರಾಸೆ ಮೂಡಿಸಿದ್ದರಲ್ಲಿ ಅನುಮಾನವೇ ಇಲ್ಲ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಅದೇ ಪಕ್ಷದ ಸರ್ಕಾರವಿದೆ. ಜನರು ಸುಲಭವಾಗಿ ತಮ್ಮನ್ೇನು ಮತ್ತೆ ಒಪ್ಪಿಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನು ಈ ಶಾಸಕರು ಬಲವಾಗಿ ಹೊಂದಿದ್ದರು. ಆದರೆ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲೂ ಬಿಜೆಪಿ ಅಧಿಕಾರದಲ್ಲಿದ್ದು ಚುನಾವಣೆ ಎದುರಿಸಿದರೂ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಾಗಲಿಲ್ಲ. ಅದು ಆಯಾ ರಾಜ್ಯ ಸರ್ಕಾರಗಳ ವೈಫಲ್ಯವೋ ಅಥವಾ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಆಡಳಿತದ ವಿರುದ್ದದ ಪರಿಣಾಮವೋ ಎಂಬುದನ್ನು ವಿಶ್ಲೇಷಿಸುವಲ್ಲಿ ಅನರ್ಹ ಶಾಸಕರು ನಿರತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಒಂದಂತೂ ಸತ್ಯ, ಅನರ್ಹ ಶಾಸಕರು ಮೊದಲು ಹಾಕಿದ್ದ ಲೆಕ್ಕಾಚಾರದಂತೆ ಎಲ್ಲವೂ ನಡೆಯುವುದು ಅನುಮಾನ ಎಂಬ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಮೊದಲು ನ್ಯಾಯಾಲಯದಲ್ಲಿ ಜಯ ಗಳಿಸಬೇಕಾಗಿದೆ. ನಂತರ ಉಪ ಚುನಾವಣೆ ಹೊತ್ತಿಗೆ ಪರಿಸ್ಥಿತಿ ಅವರ ಪರವಾಗಿ ತಿರುಗಿದರೆ ಗೆಲವು ಸುಲಭವಾಗಿ ದಕ್ಕಲಿದೆ. ಇಲ್ಲದಿದ್ದರೆ ಅವರ ರಾಜಕೀಯ ಭವಿಷ್ಯವೇ ಅತಂತ್ರವಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT