ಸಂಗ್ರಹ ಚಿತ್ರ 
ರಾಜ್ಯ

ಕುಣಿಗಲ್'ನಲ್ಲಿ ಭೀಕರ ಅಪಘಾತ: ಕಾರು-ಟ್ರ್ಯಾಕ್ಟರ್ ಡಿಕ್ಕಿ, ಐವರ ದುರ್ಮರಣ

ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.

ತುಮಕೂರು: ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ. 

ಮೃತರನ್ನು ಕಿರಣ್ (24), ರಾಜಣ್ಣ (55), ಮೋಹನ್ (22), ಮಧು (26), ರಂಗಸ್ವಾಮಿ (58) ಎಂದು ಗುರ್ತಿಸಲಾಗಿದೆ. ಮೃತರೆಲ್ಲರೂ ದೊಡ್ಡಕಲ್ಲಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ. 

ಹಬ್ಬಕ್ಕೆ ಊರಿಗೆ ತೆರಳಿದ್ದ ಮೃತ ವ್ಯಕ್ತಿಗಳು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ಚಾಲಕ ಕಾರಿನ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್'ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT