ಇನ್ವೆಸ್ಟ್ ಇನ್ ಕರ್ನಾಟಕ ಸಮ್ಮೇಳನದ ಸಾಂದರ್ಭಿಕ ಪೋಸ್ಟರ್ 
ರಾಜ್ಯ

ಜನವರಿಯಲ್ಲಿ "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ": ಪ್ರಹ್ಲಾದ ಜೋಶಿ

ಜನವರಿ 17ರಂದು ಹುಬ್ಬಳ್ಳಿಯಲ್ಲಿ " "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ" ನಡೆಯಲಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧ್ಯಕ್ಷತೆಯಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಬೆಂಗಳೂರು: ಜನವರಿ 17ರಂದು ಹುಬ್ಬಳ್ಳಿಯಲ್ಲಿ " "ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ" ನಡೆಯಲಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧ್ಯಕ್ಷತೆಯಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಪ್ರಹ್ಲಾದ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯಮ ತೆರೆಯಲು ಪ್ರಸಕ್ತವಾದ ವಾತಾವರಣವಿದೆ. ಜೊತೆಗೆ ಆ ಭಾಗದಲ್ಲಿ ಕೌಶಲ್ಯ ತರಬೇತಿ ನೀಡುವುದರಿಂದ ಮಾನವ ಸಂಪನ್ಮೂಲ ಕೂಡ ಹೆಚ್ಚಲಿದೆ. ಸಾರಿಗೆ ಸಂಪರ್ಕಕ್ಕೆ ವಿಮಾನ ನಿಲ್ದಾಣವೂ ಇರುವುದರಿಂದ ಉದ್ಯಮಿಗಳಿಗೆ ಇಲ್ಲಿ ಹೂಡಿಕೆ ಮಾಡಲು ಸೂಕ್ತ ರೀತಿಯ ವ್ಯವಸ್ಥೆಯೂ ಆಗಲಿದೆ. ಈ ನಿಟ್ಟಿನಲ್ಲಿ ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಈ ಭಾಗದಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯುವುದರಿಂದ ಈ ಭಾಗದ ಯುವಕರಿಗೆ ವೃತ್ತಿಪರ ತರಬೇತಿ ನೀಡಿ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗಲಿದೆ. ತರಬೇತಿ ಜೊತೆಗೆ ಉದ್ಯೋಗದಲ್ಲಿ ಖಾತ್ರಿ ಸಹ ನೀಡಿದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. ಈ ನಿಟ್ಟಿನಲ್ಲಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಹುಬ್ಬಳ್ಳಿ ಭಾಗದಲ್ಲಿ ಯಾವ ವಲಯಗಳಲ್ಲಿ ಕೈಗಾರಿಕೆಗೆ ಪೂರಕ ವಾತಾವರಣವಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ. ಡಿಫೆನ್ಸ್ ಅಥವಾ ಇತರೆ ಕೈಗಾರಿಕಾ ತಯಾರಿಕಾ ಘಟಕ ಸ್ಥಾಪನೆಗೆ ಈ ಪ್ರದೇಶ ಪ್ರಸ್ತುತ ಎಂಬುದನ್ನು ತಿಳಿದುಕೊಳ್ಳಲು ಅಭಿಪ್ರಾಯ ಸಂಗ್ರಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ಕೈಗಾರಿಕಾ ಮುಖ್ಯಸ್ಥರು, ಕೈಗಾರಿಕಾ ಸಂಘಸಂಸ್ಥೆ ಸಂಬಂಧಪಟ್ಟವರೊಂದಿಗೆ ಪ್ರಾಥಮಿಕ ಸಭೆ ಆಯೋಜಿಸುವಂತೆಯೂ ಸೂಚಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ ಗೌರವ್‌ ಗುಪ್ತ ಮಾತನಾಡಿ, ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನದ ಭಾಗವಾಗಿ ನವೆಂಬರ್ ತಿಂಗಳಿಂದ ಜನವರಿ ವರೆಗೂ ಹೈದರಾಬಾದ್, ಮುಂಬೈ, ಕರ್ನಾಟಕದಲ್ಲಿ ರೋಡ್‌ ಶೋ ನಡೆಸಲು ಕಾರ್ಯಕ್ರಮ ರೂಪಿಸಲಾಗಿದೆ. ಜನವರಿ ತಿಂಗಳಲ್ಲಿ ನಡೆಯುವ ಸಮ್ಮೇಳನದಲ್ಲಿ 500ಕ್ಕೂ ಹೆಚ್ಚು ಉದ್ದಿಮೆದಾರರನ್ನು ಆಕರ್ಷಿಸುವ ಗುರಿ ಹೊಂದಲಾಗಿದೆ. ಜೊತೆಗೆ ವಿವಿದ ಸೆಕ್ಟರ್‌ಗಳ ಕುರಿತು ವಿಚಾರ ಸಂಕಿರಣ ಕೂಡ ನಡೆಯಲಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!