ಅಶ್ವತ್ಥ ನಾರಾಯಣ 
ರಾಜ್ಯ

ದೀಪಾವಳಿಯಂದು ಟಿಪ್ಪು ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಪೋಸ್ಟ್ ಹಾಕಿದ್ದೇಕೆ?

ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ  ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ  ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

2 ಶತಮಾನಗಳ ಹಿಂದೆ ಇದೇ ನರಕ ಚತುರ್ದಶಿಯ ದಿನ, ಮತಾಂಧ ಟಿಪ್ಪು ಸುಲ್ತಾನನ ಕ್ರೌರ್ಯ , ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಈ ಬೆಳಕಿನ ಹಬ್ಬವನ್ನು ಆಚರಿಸುತ್ತಿದ್ದರೆ, ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೇ ಕತ್ತಲು ಆವರಿಸುತ್ತಿರುತ್ತದೆ.

ಈ ಹೃದಯವಿದ್ರಾವಕ ಘಟನೆಯು ಇತಿಹಾಸದ ಪುಟಗಳಿಗೆ ಮಾತ್ರ ಸೀಮಿತವಾಗಬಾರದು, ನಮ್ಮ ಸಾಮೂಹಿಕ ನೆನಪಿನಿಂದ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಹಲವರು ಬೆಂಬಲಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT