ಪಠ್ಯಕ್ರಮದಲ್ಲಿ ಟಿಪ್ಪು ಪಠ್ಯ ಕೈಬಿಡುವ ವಿಚಾರ; ಮೂರು ದಿನದಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ 
ರಾಜ್ಯ

ಪಠ್ಯಕ್ರಮದಲ್ಲಿ ಟಿಪ್ಪು ಪಠ್ಯ ಕೈಬಿಡುವ ವಿಚಾರ; ಮೂರು ದಿನದಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್‌ ಕುರಿತ ಪಠ್ಯವನ್ನು ತೆಗೆದುಹಾಕುವ ಸಂಬಂಧ ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆ ಕರೆದು ಮೂರು ದಿನದೊಳಗೆ ವರದಿ ಸಲ್ಲಿಸುವಂತೆ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ.

ಬೆಂಗಳೂರು: ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್‌ ಕುರಿತ ಪಠ್ಯವನ್ನು ತೆಗೆದುಹಾಕುವ ಸಂಬಂಧ ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆ ಕರೆದು ಮೂರು ದಿನದೊಳಗೆ ವರದಿ ಸಲ್ಲಿಸುವಂತೆ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ.
  
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಅವರು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರಿಗೆ ಸಲ್ಲಿಸಿದ ಮನವಿಯ ಮೇರೆಗೆ ಸಚಿವರು ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಸೂಚನೆ ನೀಡಿದ್ದಾರೆ.
  
ಪಠ್ಯಪುಸ್ತಕ ರಚನಾ ಸಮಿತಿ ಸಭೆಗೆ ಈ ಶಾಸಕರನ್ನೂ ಆಹ್ವಾನಿಸಿ, ಈ ಪಠ್ಯದ ಅಗತ್ಯತೆ ಹಾಗೂ ಅದನ್ನು ಉಳಿಸಿಕೊಳ್ಳುವ ಇಲ್ಲವೇ ತೆಗೆದುಹಾಕುವ ಕುರಿತು ಸಾಧಕ ಬಾಧಕಗಳ ಕುರಿತಂತೆ ಚರ್ಚಿಸಬೇಕು ಎಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ. 
  
ಪಠ್ಯದಲ್ಲಿ ಟಿಪ್ಪು ಬದಲಿಗೆ ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸಬೇಕು ಎಂದು ಶಾಸಕರು ಮನವಿ ಸಲ್ಲಿಸಿದ್ದರು. ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಬಾರಿ ಆಚರಣೆಯನ್ನು ಸರ್ಕಾರ ಕೈಬಿಟ್ಟಿದೆ. ಅದರ ಬೆನ್ನಲ್ಲೇ ಪಠ್ಯದಿಂದಲೂ ಟಿಪ್ಪು ಸುಲ್ತಾನ್‌ ಚರಿತ್ರೆಯನ್ನು ತೆಗೆಯಬೇಕೆಂಬ ಒತ್ತಾಯ ಆರಂಭಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT