ಚಿಕ್ಕಮಗಳೂರು: ಹಳ್ಳದಲ್ಲಿ ಈಜಲು ಹೋಗಿದ್ದ ಯುವಕನೊರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ನಡೆದಿದೆ.
ಇಟ್ಟಿಗೆ ಹಳ್ಳದಲ್ಲಿ ಈಜಲು ಹೋಗಿದ್ದ ಯುವಕ 18 ವರ್ಷದ ಸಂದೀಪ್ ಮೃತ ದುರ್ದೈವಿ. ಸಂದೀಪ್ ಎ.ರಂಗಾಪುರ ನಿವಾಸಿಯಾಗಿದ್ದು, ಹಳ್ಳದಲ್ಲಿ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾನೆ.
ಯುವಕನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.