ಹಕ್ಕಿ ಜ್ವರದ ಭೀತಿ; ಪಕ್ಷಿಧಾಮ, ಕೆರೆಗಳಲ್ಲಿ ಹೈ ಅಲರ್ಟ್ 
ರಾಜ್ಯ

ಹಕ್ಕಿ ಜ್ವರದ ಭೀತಿ; ಪಕ್ಷಿಧಾಮ, ಕೆರೆಗಳಲ್ಲಿ ಹೈ ಅಲರ್ಟ್

ರಾಜ್ಯ ಅರಣ್ಯ ಇಲಾಖೆ ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು, ಲಿಂಗಾಂಬುಧಿ ಕೆರೆ ಹಾಗೂ ಕುಕ್ಕರಹಳ್ಳಿ ಕೆರೆಯಲ್ಲಿ ಏವಿಯನ್ ಇನ್ ಫ್ಲ್ಯೂಯೆನ್ಜಾ ಅಥವಾ ಹಕ್ಕಿ ಜ್ವರದ ವಿರುದ್ಧ ಹೈ ಅಲರ್ಟ್ ಘೋಷಿಸಿದೆ. 

ಮೈಸೂರು: ರಾಜ್ಯದ ಕೆಲ ಪಕ್ಷಿಧಾಮ ಹಾಗೂ ಕೆರೆಗಳಲ್ಲಿ ಅಪರೂಪದ ಹಕ್ಕಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಅರಣ್ಯ ಇಲಾಖೆ ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು, ಲಿಂಗಾಂಬುಧಿ ಕೆರೆ ಹಾಗೂ ಕುಕ್ಕರಹಳ್ಳಿ ಕೆರೆಯಲ್ಲಿ ಏವಿಯನ್ ಇನ್ ಫ್ಲ್ಯೂಯೆನ್ಜಾ ಅಥವಾ ಹಕ್ಕಿ ಜ್ವರದ ವಿರುದ್ಧ ಹೈಅಲರ್ಟ್ ಘೋಷಿಸಿದೆ. 

ಸೋಮವಾರ ಮೈಸೂರು ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಮತ್ತೊಂದು ಸ್ಪಾಟ್ –ಬಿಲ್ಡ್ ಪೆಲಿಕನ್ (ನೀರು ಹಕ್ಕಿ) ಮೃತಪಟ್ಟ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕೆ.ಸಿ.ಪ್ರಶಾಂತ್ ತಿಳಿಸಿದ್ದಾರೆ.

ಈಗಲೇ ಹಕ್ಕಿಯ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ತೀರ್ಮಾನಿಸಲಾಗದು. ಆದರೆ, ನಾವು ಯಾವುದೇ ಅವಘಡಗಳಿಗೆ ಅವಕಾಶ ನೀಡುವುದಿಲ್ಲ. ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು ಮತ್ತು ಲಿಂಗಾಂಬುಧಿ ಕೆರೆಗಳ ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಕ್ಕಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅವುಗಳ ಬಾಯಿಯಿಂದ ದ್ರವ ರೂಪದ ವಸ್ತು ಹೊರಬರುತ್ತಿದೆಯೇ ಎಂಬುದರ ತಪಾಸಣೆ ನಡಸುವಂತೆ ಸೂಚಿಸಿದ್ದೆವೆ ಎಂದು ಪ್ರಶಾಂತ್  ಮಾಹಿತಿ ನೀಡಿದ್ದಾರೆ. 

ಕಳೆದ ವರ್ಷ ಕುಕ್ಕರಹಳ್ಳಿ ಕೆರೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡು ಎರಡು ಪೆಲಿಕನ್ ಗಳು ಮೃತಪಟ್ಟಿದ್ದವು. ಇದೇ ಭೀತಿಯಿಂದ 2017ರ ಜನವರಿ ತಿಂಗಳಲ್ಲಿ ಮೈಸೂರು ಮೃಗಾಲಯವನ್ನು ಸ್ಥಗಿತಗೊಳಿಸಲಾಗಿತ್ತು. ನಿನ್ನೆ ಮೃತಪಟ್ಟ ಹಕ್ಕಿಯ ಮಾದರಿಯನ್ನು ಹೆಬ್ಬಾಳದ ಪ್ರಾಣಿ ಆರೋಗ್ಯ ಕೇಂದ್ರದ ದಕ್ಷಿಣ ಪ್ರದೇಶದ ರೋಗಗಳ ತಪಾಸಣಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಕ್ಕಿಯ ಮೃತದೇಹವನ್ನು ಥರ್ಮಕೋಲ್ ನಲ್ಲಿ ಸುತ್ತಿ ಬೆಂಗಳೂರಿಗೆ ರವಾನಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT