ಹೆಬ್ರಿ: ಸೀತಾನದಿಯಲ್ಲಿ ಸ್ನಾನಕ್ಕಾಗಿ ಇಳಿದಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಸಮೀಪ ನಡೆದಿದೆ.
ಹೆಬ್ರಿಯ ಚಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಘಟಕದ ಸಮೀಪದ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಚಾರ ಕಲ್ಲಿಲ್ಲು ನಿವಾಸಿ ಸಂತೋಷ (20) ಮೃತ ದುರ್ದೈವಿ.
ಮಂಗಳವಾರ ಸಂಜೆ ನಡೆದ ಈ ಘಟನೆಯಲ್ಲಿ ಯುವಕನ ಮೃತದೇಹ ಇನ್ನೂ ಸಿಕ್ಕಿಲ್ಲ. ಈ ಸಂಬಂಧ ಮಾಹಿತಿ ಪಡೆದ ಹೆಬ್ರಿ ಪೋಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನೊಡನೆ ಶೋಧಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.