ಸಂಗ್ರಹ ಚಿತ್ರ 
ರಾಜ್ಯ

ಸಾರ್ವಜನಿಕರ ನೂರೆಂಟು ಸಮಸ್ಯೆಗಳಿಗೆ 112 ಪರಿಹಾರ!

ದರೋಡೆ, ಡಕಾಯಿತಿ, ಅಕ್ಕ- ಪಕ್ಕದ ಮನೆಯವರ ಜೊತೆಗೆ ಜಗಳ ಮತ್ತಿತರ ತುರ್ತು ಸಂದರ್ಭಗಳಲ್ಲಿ ಇನ್ನು ಮುಂದೆ 100 ಸಹಾಯವಾಣಿ ಮೊರೆ ಹೋಗುವಂತಿಲ್ಲ. ಬದಲಿಗೆ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬೇಕಾಗುತ್ತದೆ. 

ಬೆಂಗಳೂರು: ಸಾರ್ವಜನಿಕರ ನೂರೆಂಟು ಸಮಸ್ಯೆಗಳಿಗೆ ಇನ್ನು ಮುಂದೆ 112 ಪರಿಹಾರ! ಹೌದು. ಸರಗಳ್ಳತನ, ಮನೆಗಳ್ಳತನದಂತಹ ಕಳ್ಳತನ ಪ್ರಕರಣಗಳು, ದರೋಡೆ, ಡಕಾಯಿತಿ, ಅಕ್ಕ- ಪಕ್ಕದ ಮನೆಯವರ ಜೊತೆಗೆ ಜಗಳ ಮತ್ತಿತರ ತುರ್ತು ಸಂದರ್ಭಗಳಲ್ಲಿ ಇನ್ನು ಮುಂದೆ 100 ಸಹಾಯವಾಣಿ ಮೊರೆ ಹೋಗುವಂತಿಲ್ಲ. ಬದಲಿಗೆ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬೇಕಾಗುತ್ತದೆ. 

ಸಾರ್ವಜನಿಕ ಸ್ಥಳಗಳಲ್ಲಿ ರೌಡಿಗಳ ಹೊಡೆದಾಟ ಕದನಗಳು ನಡೆದಾಗ, ಎಲ್ಲಾದರೂ ಆತ್ಮಹತ್ಯೆ ಅಥವಾ ಕೊಲೆ ಪ್ರಕರಣಗಳು ಘಟಿಸಿದಾಗಲೂ  112 ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಗತ್ಯ ನೆರವು ಪಡೆದುಕೊಳ್ಳಬಹುದಾಗಿದೆ. 

ಅದೇ ರೀತಿ , ಅಗ್ನಿ ಅವಘಡಗಳು ಸಂಭವಿಸಿದಾಗ 101, ಅಪಘಾತಗಳಾದಾಗ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಸಂಖ್ಯೆಗೆ ಡಯಲ್ ಮಾಡುವ ಅವಶ್ಯಕತೆಯೂ ಇಲ್ಲ. ಇವೆಲ್ಲಕ್ಕೂ  ಒಂದೇ ಪರಿಹಾರ ದೂರವಾಣಿ ಸಂಖ್ಯೆ 112.

ಈ 112 ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT