ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರದಿಂದ ಸಾಮೂಹಿಕ ವಿವಾಹಕ್ಕೆ ಮುಹೂರ್ತ ಫಿಕ್ಸ್, ಷರತ್ತುಗಳು ಅನ್ವಯ

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಸಾಮೂಹಿಕ ವಿವಾಹ ಯೋಜನೆಯನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಸಾಮೂಹಿಕ ವಿವಾಹ ಯೋಜನೆಯನ್ನು ಪ್ರಕಟಿಸಿದೆ.

ಸರ್ಕಾರದ ಹೊಸ ಯೋಜನೆ ಕುರಿತು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಮುಂದಿನ ವರ್ಷದಿಂದ ಸಾಮೂಹಿಕ‌ ಮದುವೆಗಳನ್ನು ಸರ್ಕಾರದಿಂದ ಮಾಡಲು ನಿರ್ಧರಿಸಿದ್ದೇವೆ ಎಂದರು.

"ಎ" ದರ್ಜೆಯ 90 ರಿಂದ 100 ದೇವಾಲಯಗಳಲ್ಲಿ ಸಾಮೂಹಿಕ ಮದುವೆ ನೆರವೇರಲಿದೆ. ಮೊದಲ ಸಾಮೂಹಿಕ ಮದುವೆ ಏಪ್ರಿಲ್ 26 ಮತ್ತು ಎರಡನೇ ಸಾಮೂಹಿಕ ಮದುವೆ ಮೇ 24 ರಂದು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ವಧುವಿನ ತಾಳಿಗಾಗಿ ₹40 ಸಾವಿರ, ಧಾರೆ ಸೀರೆ ಖರೀದಿಸಲು ₹10 ಸಾವಿರ ಹಾಗೂ ವರನಿಗೆ ಪಂಚೆ, ಧೋತಿ ಖರೀದಿಗೆ ₹5 ಸಾವಿರ ನೀಡಲಾಗುವುದು. ಆಯಾ ಜಿಲ್ಲಾಧಿಕಾರಿಗಳು ಒಂದು ತಿಂಗಳ ಮೊದಲಾಗಿ ವರ ಮತ್ತು ವಧುವಿನ ಖಾತೆಗಳಿಗೆ ಈ ಮೊತ್ತ ಜಮಾ ಮಾಡಲಿದ್ದಾರೆ ಎಂದರು.

ಈ ವರ್ಷ 1 ಸಾವಿರ ವಿವಾಹ ನಡೆಯುವ ನಿರೀಕ್ಷೆ ಇದೆ. ಮುಜರಾಯಿ ದೇವಾಲಯಗಳಿಗೆ ಬರುವ ಆದಾಯದಿಂದಲೇ ಈ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ ಮತ್ತು ಮುಜರಾಯಿ ದೇವಾಲಯಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲಾಗಿದೆ ಎಂದರು.

ಆರ್ಥಿಕವಾಗಿ ಸಧೃಡವಾಗಿರುವ ಆಯ್ದ 100 ‘ಎ’ದರ್ಜೆ ದೇಗುಲಗಳಲ್ಲಿ ಸರ್ಕಾರದಿಂದ ಪ್ರತೀ ವರ್ಷ 10 ಸಾವಿರಕ್ಕೂ ಅಧಿಕ ಉಚಿತ ಸಾಮೂಹಿಕ ವಿವಾಹ ಆಯೋಜಿಸಲು ರಾಜ್ಯ ಧಾರ್ಮಿಕ ಪರಿಷತ್ ತೀರ್ಮಾನಿಸಿದೆ.

ಆರ್ಥಿಕವಾಗಿ ಸದೃಢವಾಗಿರುವ ದೇವಾಲಯಗಳು ವರ್ಷಕ್ಕೊಮ್ಮೆ 100 ಜೋಡಿಗಳಿಗೆ ವಿವಾಹ ನೆರವೇರಿಸಿದರೂ 100 ದೇಗುಲಗಳಿಂದ ವಾರ್ಷಿಕ 10,000 ಜೋಡಿ ವಿವಾಹ ನೆರವೇರಿಸಬಹುದಾಗಿದೆ. ಆ ಮೂಲಕ ಸಾಮೂಹಿಕ ವಿವಾಹವನ್ನು ಪ್ರೋತ್ಸಾಹಿಸುವುದು, ಆರ್ಥಿಕವಾಗಿ ಬಡ ಕುಟುಂಬಗಳ ಮೇಲೆ ಬೀಳಬಹುದಾದ ಸಾಲದ ಹೊರೆ ತಪ್ಪಿಸುವುದು ಸರ್ಕಾರದ ಮಹದುದ್ದೇಶವಾಗಿದೆ ಎಂದು ಸಚಿವರು ತಮ್ಮ ಆಶಯವನ್ನು ಬಿಚ್ಚಿಟ್ಟರು.

ಷರತ್ತುಗಳು ಏನು?
30 ದಿನಗಳ ಮೊದಲು ನೋಂದಣಿ ಮಾಡಿಕೊಳ್ಳಬೇಕು ಮತ್ತು ವಧು-ವರರ ಪೋಷಕರು ಮದುವೆಯಲ್ಲಿ ಭಾಗವಹಿಸಬೇಕು. ಪೋಷಕರು ವಧು-ವರರ ದಾಖಲೆಯನ್ನು ನೀಡಬೇಕಾಗುತ್ತದೆ. ಪರೋಕ್ಷವಾಗಿ ಪ್ರೀತಿಸಿ ಮದುವೆ ಆಗುವ ಮಂದಿಗೆ ಅವಕಾಶವಿಲ್ಲ. ಎರಡನೇ ಮದುವೆಗೆ ಅವಕಾಶ ಇಲ್ಲ. ಕಡ್ಡಾಯವಾಗಿ ವರನಿಗೆ 21, ವಧುವಿಗೆ 18 ವರ್ಷ ಆಗಿರಲೇಬೇಕು. ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ ನಡೆಯುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT