ಸಂತೋಷ್ ಹೆಗ್ಡೆ ಅವರಿಂದ ಕೃತಿ ಬಿಡುಗಡೆ 
ರಾಜ್ಯ

ಸರ್ಕಾರಿ  ಸವಲತ್ತುಗಳಿಗಾಗಿ ಕಿತ್ತಾಡುವ ವ್ಯವಸ್ಥೆಯಲ್ಲಿ ಬಂಜಾರ ಸಮುದಾಯ ಮಾದರಿ: ನ್ಯಾ. ಎನ್. ಸಂತೋಷ್ ಹೆಗ್ಡೆ 

ಇತರೆ ಜಾತಿಗಳಿಗೆ ಬಂಜಾರ ಸಮಾಜ ಮಾದರಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಬೆಂಗಳೂರು: ಮೀಸಲಾತಿ, ಸರ್ಕಾರಿ ಸವಲತ್ತುಗಳಿಗಾಗಿ ಕಿತ್ತಾಡುವ ಜನ ಸಮುದಾಯದ ನಡುವೆ ಬಂಜಾರ ಸಮುದಾಯ ತಾವು ಹಿಂದುಳಿದವರಲ್ಲ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವುದು ಶ್ಲಾಘನೀಯ. ಇತರೆ ಜಾತಿಗಳಿಗೆ ಬಂಜಾರ ಸಮಾಜ ಮಾದರಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿಂದು ಶಿವಪುತಳಾ ಪ್ರಕಾಶನ ಹೊರ ತಂದಿರುವ ಸಂತೋಷ ಶಿವಲಾಲ ರಾಥೋಡ ಅವರ " ಬಂಜಾರ ಚರಿತಾಮೃತ " ಕೃತಿ ಬಿಡುಗಡೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಮೀಸಲಾತಿ, ವಿವಿಧ ಸವಲತ್ತುಗಳನ್ನು ಪಡೆಯಲು ಪೈಪೋಟಿ ನಡೆಸುವ ವಿವಿಧ ಜಾತಿ, ಜನಾಂಗಗಳ ನಡುವೆ ಬಂಜಾರ ಸಮುದಾಯ ವಿಭಿನ್ನವಾಗಿ ಕಾಣುತ್ತದೆ. ಎಲ್ಲರೂ ಅಂದುಕೊಂಡಂತೆ ನಾವು ನಾವು ಹಿಂದುಳಿದವರಲ್ಲ. ನಾವು ಕ್ಷತ್ರಿಯ ಸಮುದಾಯಕ್ಕೆ ಸೇರಿದವರು ಎಂದು ಗರ್ವದಿಂದ ಹೇಳಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು. 

ಬಂಜಾರ ಸಮುದಾಯದಲ್ಲಿ ಹತ್ತು ಹಲವು ವೈಶಿಷ್ಟ್ಯಗಳಿವೆ. ಅಂತಹ ವಿಶೇಷತೆಯನ್ನು ತೆರೆದಿಡುವ ಪ್ರಯತ್ನವನ್ನು " ಬಂಜಾರ ಚರಿತಾಮೃತ" ಕೃತಿ ಮಾಡುತ್ತಿದೆ. ಬಂಜಾರ ಜನಾಂಗದ ಬಗ್ಗೆ ನಾವು ತಿಳಿದುಕೊಂಡಿದ್ದು ಅತ್ಯಲ್ಪ. ಆದರೆ ಈ ಕೃತಿ ನಮ್ಮೆಲ್ಲರ ತಪ್ಪು ಕಲ್ಪನೆಗಳನ್ನು ದೂರ ಮಾಡುತ್ತದೆ. ಬಂಜಾರ ಜನಾಂಗದಲ್ಲಿ ಎಲ್ಲಕ್ಕಿಂತ ಹೆಚ್ಚು ಸಾಂಸ್ಕೃತಿಕ ಶ್ರೀಮಂತಿಕೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT