ಸಂಗ್ರಹ ಚಿತ್ರ 
ರಾಜ್ಯ

ಹಾವೇರಿಯಲ್ಲಿ ಪ್ರವಾಹ ಪೀಡಿತ 25 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ: ಯಡಿಯೂರಪ್ಪ

ಜಿಲ್ಲೆಯ ವರದಾ ನದಿಯ ಪ್ರವಾಹದಿಂದಾಗಿ ತೊಂದರೆಗೀಡಾಗಿರುವ ಎಲ್ಲಾ 25 ಗ್ರಾಮಗಳನ್ನು ಜನರ ಇಚ್ಚೆಯಂತೆ ತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದರು. 

ಹಾವೇರಿ: ಜಿಲ್ಲೆಯ ವರದಾ ನದಿಯ ಪ್ರವಾಹದಿಂದಾಗಿ ತೊಂದರೆಗೀಡಾಗಿರುವ ಎಲ್ಲಾ 25 ಗ್ರಾಮಗಳನ್ನು ಜನರ ಇಚ್ಚೆಯಂತೆ ತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದರು.

ಶನಿವಾರ ಇಲ್ಲಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗ್ರಾಮಗಳನ್ನು ಸ್ಥಳಾಂತರಿಸಲು ಸಮೀಕ್ಷೆ ನಡೆಸಿ ವಿವರವಾದ ವರದಿಯನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಆದರೆ, ಪ್ರವಾಹ ಪೀಡಿತ ಇತರ ಗ್ರಾಮಗಳಲ್ಲಿ ಸಂಪೂರ್ಣವಾಗಿ ಕುಸಿದ ಮನೆಗಳ ಮಾಲೀಕರಿಗೆ `5 ಲಕ್ಷ ರೂ.ಪ್ರವಾಹ ಪೀಡಿತ ಪ್ರತಿ ಕುಟುಂಬಕ್ಕೆ `10,000 ಪಾವತಿಸಲಾಗಿದೆ 'ಎಂದು ಅವರು ಹೇಳಿದರು.

ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರದ ನೆರವು ಕೇಳಿದ ಸಿಎಂ ಇತ್ತೀಚಿನ ಪ್ರವಾಹದಿಂದಾಗಿ ರಾಜ್ಯಕ್ಕೆ 32,000 ಕೋಟಿ ರೂ. ನಷ್ಟವಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕ ಭರವಸೆ ನೀಡಿದ್ದು, ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ನಷ್ಟದ ಬಗ್ಗೆ ಕೇಂದ್ರಕ್ಕೆ ತಿಳಿಸಲಿದೆ ಎಂದರು. ಯಡಿಯೂರಪ್ಪ ಅವರೊಂದಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ , ಕಂದಾಯ ಸಚಿವ ಆರ್.ಅಶೋಕ್, , ಶಾಸಕರಾದ ಸಿಎಂ ಉದಾಸಿ, ನೆಹರು ಓಲೆಕಾರ್,  ವಿರೂಪಾಕ್ಷಪ್ಪ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಇತರರು ಇದ್ದರು.

ಆ ಬಳಿಕ ಹಾವೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲೆಗೆ ಹೆಚ್ಚುವರಿ 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.ನೆರವು ನೀಡುವ ಮೂಲಕ ಪ್ರವಾಹ ಪೀಡಿತ ಹಳ್ಳಿಗಳ ಜೀವನವನ್ನು ಸಹಜ ಸ್ಥಿತಿಗೆ ತರಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾಮಾನ್ಯ ಸ್ಥಿತಿಗೆ ಬರುವವರೆಗೆ, ಇತರ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಆಗಿರುವ ಬೆಳೆಗಳ ನಷ್ಟವನ್ನು ಅಂದಾಜು ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಯಡಿಯೂರಪ್ಪ, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿವರವಾದ ಬೆಳೆ ನಷ್ಟ ವರದಿಯನ್ನು ಪಡೆದ ನಂತರ ರಾಜ್ಯ ಸರ್ಕಾರವು ಎಲ್ಲಾ ರೈತರಿಗೆ ಪರಿಹಾರವನ್ನು ನೀಡಲಿದೆ ಎಂದು ಹೇಳಿದರು. ಯಾವುದೇ ಸಂದರ್ಭದಲ್ಲೂ ಇಂತಹ ಮಳೆ ಮತ್ತು ಪ್ರವಾಹದಿಂದ ಕೃಷಿ ಸಮುದಾಯಕ್ಕೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ 1,23,065 ಹೆಕ್ಟೇರ್ ಬೆಳೆಗಳು ಹಾನಿಗೀಡಾಗಿವೆ ಮತ್ತು ಅಂದಾಜು ನಷ್ಟ 750.92 ಕೋಟಿ ರೂ. ಮಳೆ ಮತ್ತು ಪ್ರವಾಹದಿಂದಾಗಿ 15,387 ಮನೆಗಳಿಗೆ ಹಾನಿಯಾಗಿದೆ ಮತ್ತು ಆದ್ದರಿಂದ ಸರ್ಕಾರವು ಜಿಲ್ಲೆಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಗೃಹಸಚಿವ ಬೊಮ್ಮಾಯಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT