ಮುಖ್ಯಮಂತ್ರಿ ಚಂದ್ರು, ಚಂಪಾ ಸೇರಿ 70 ಮಂದಿಗೆ ಕೆಂಪೇಗೌಡ ಪ್ರಶಸ್ತಿ 
ರಾಜ್ಯ

ಮುಖ್ಯಮಂತ್ರಿ ಚಂದ್ರು, ಚಂಪಾ ಸೇರಿ 70 ಮಂದಿಗೆ ಕೆಂಪೇಗೌಡ ಪ್ರಶಸ್ತಿ 

2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ಮುಖ್ಯಮಂತ್ರಿ ಚಂದ್ರು, ಚಂದ್ರಶೇಖರ ಪಾಟೀಲ, ಶಿವರಾಮಯ್ಯ ಸೇರಿ 70 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

 ಬೆಂಗಳೂರು:2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ಮುಖ್ಯಮಂತ್ರಿ ಚಂದ್ರು, ಚಂದ್ರಶೇಖರ ಪಾಟೀಲ, ಶಿವರಾಮಯ್ಯ ಸೇರಿ 70 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 4ರಂದು ಡಾ. .ರಾಜ್​ಕುಮಾರ್ ಗಾಜಿನ ಮನೆಯಲ್ಲಿ ನಡೆಯುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಫಾಲಿಕೆ (ಬಿಬಿಎಂಪಿ) ಪ್ರತಿವರ್ಷ ನಿಡುವ ಈ ಪ್ರಶಸ್ತಿ ಆಯ್ಕೆಗೆ ಈ ಬಾರಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಕೆಂಪೇಗೌಡ ಪ್ರಶಸ್ತಿಯು  25 ಸಾವಿರ ನಗದು ಹಾಗೂ ಕೆಂಪೇಗೌಡರ ಸ್ಮರಣಿಕೆಯನ್ನು ಹೊಂದಿರುತ್ತದೆ. 

ಪ್ರಶಸ್ತಿ ಪಡೆದ ಪ್ರಮುಖರ ಪಟ್ಟಿ ಹೀಗಿದೆ-

ಮುಖ್ಯಮಂತ್ರಿ ಚಂದ್ರು (ಸಿನಿಮಾ)
ಚಂಪಾ (ಸಾಹಿತ್ಯ)
 ಪ್ರೊ. ಶಿವರಾಮಯ್ಯ (ಸಾಹಿತ್ಯ)
ಅಬ್ದುಲ್ ಬಷೀರ್ (ಸಾಹಿತ್ಯ)
ಪ್ರೊ.ರವಿವರ್ಮ ಕುಮಾರ್ (ಕಾನೂನು)
ಬಿಂದುರಾಣಿ (ಕ್ರೀಡೆ)
ಶಾಂತರಾಮಮಮೂರ್ತಿ(ಕ್ರೀಡೆ)
ಸೈಯ್ಯದ್ ಇಬಯಾಯತುಲ್ಲಾ (ಅಂಗವಿಕಲ ಕ್ರೀಡಾಪಟು)
ಕುಮಾರಿ ಪ್ರತ್ಯಕ್ಷಾ- (ಬಾಲ ಪ್ರತಿಭೆ)
ಪ್ರೊ. ನಾಗೇಶ್ ಬೆಟ್ಟಕೋಟೆ (ರಂಗಭೂಮಿ)
ಮಂಜುಳಾ ಗುರುರಾಜ್ (ಸಂಗೀತ)
ಡಿ.ರೂಪಾ (ಸರ್ಕಾರಿ ಸೇವೆ)
ಅನುಚೇತ್​ ಮತ್ತು ತಂಡ (ಗೌರಿ ಹತ್ಯೆ ಪ್ರಕರಣ ಬೇಧಿಸಿದ್ದಕ್ಕೆ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT