ಉಡುಪಿ: ಹುಲಿ ವೇಷಧಾರಿಗಳ ವಾಹನ ಪಲ್ಟಿ ಓರ್ವ ಸಾವು, ಇನ್ನಿಬ್ಬರು ಗಂಭೀರ 
ರಾಜ್ಯ

ಉಡುಪಿ: ಹುಲಿ ವೇಷಧಾರಿಗಳ ವಾಹನ ಪಲ್ಟಿ ಓರ್ವ ಸಾವು, ಇನ್ನಿಬ್ಬರು ಗಂಭೀರ

ಗಣೇಶೋತ್ಸವ ಬಳಿಕ ಗಣೇಶ ವಿಸರ್ಜನೆ ಮೆರವಣಿಗೆಗಾಗಿ ಆಗಮಿಸಿದ್ದ ಹುಲಿ ವೇಷಧಾರಿಗಳ ತಂಡದ ವಾಹನ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆ ಸಂತೆಕಟ್ಟೆಯಲ್ಲಿ ನಡೆದಿದೆ. 

ಉಡುಪಿ: ಗಣೇಶೋತ್ಸವ ಬಳಿಕ ಗಣೇಶ ವಿಸರ್ಜನೆ ಮೆರವಣಿಗೆಗಾಗಿ ಆಗಮಿಸಿದ್ದ ಹುಲಿ ವೇಷಧಾರಿಗಳ ತಂಡದ ವಾಹನ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆ ಸಂತೆಕಟ್ಟೆಯಲ್ಲಿ ನಡೆದಿದೆ.

ಬುಧವಾರ ಬೆಳಗಿನ ಸಮಯ ಸಂತೆಕಟ್ಟೆಯ ನೇಜಾರಿನಲ್ಲಿ ನಡೆಅ ಘಟನೆಯಲ್ಲಿ ಪಡುಬಿದ್ರೆಯ ಸುಮಂತ್ (22) ಸಾವನ್ನಪ್ಪಿದ್ದಾರೆ. 

ಹುಲಿವೇಷಧಾರಿಗಳು ನೇಜಾರಿನಿಂದ ಸಂತೆಕಟ್ಟೆಗೆ ಆಗಮಿಸುತ್ತಿದ್ದ ವೇಳೆ ಅಪಘಾತ ನಡೆದಿದ್ದು ನಿಯಂತ್ರಣ ತಪ್ಪಿದ ಟೆಂಪೋ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ.ಗಂಭೀರ ಗಾಯಗೊಂಡ ಸುಮಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೆಂಪೋದಲ್ಲಿ ಒಟ್ಟು ಹನ್ನೆರಡು ಮಂದಿ ಹುಲಿವೇಷಧಾರಿ ತಂಡದ ಸದಸ್ಯರಿದ್ದರು. ಅದರಲ್ಲಿ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರ ಗಾಯಗೊಂಡವರನ್ನು ಮಣಿಪಾಲದ ಕೆ ಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಉಡುಪಿ ಹಾಗೂ ಮಲ್ಪೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT