ಸುನೀಲ್ ಅರೋರಾ 
ರಾಜ್ಯ

ಒಂದು ದೇಶ- ಒಂದು ಚುನಾವಣೆಗೆ ಚುನಾವಣಾ ಆಯೋಗ ಪರೋಕ್ಷ ಬೆಂಬಲ 

ಇವಿಎಂ ತಿರುಚಲು ಯಾರಿಗೂ ಸಾಧ್ಯವಿಲ್ಲ. ಅವುಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ. ಈ ಮತಯಂತ್ರಗಳ ಬಗ್ಗೆ ಯಾರೂ ಸಹ ಅನುಮಾನಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ.

ಬೆಂಗಳೂರು: ಒಂದು ದೇಶ -ಒಂದು ಚುನಾವಣೆ ವಿಚಾರ ಬಹಳ ಗಂಭೀರವಾಗಿದ್ದು, ಸಂವಿಧಾನದಲ್ಲಿ ತಿದ್ದುಪಡಿಗಳು ಸೇರಿದಂತೆ ಸರಿಯಾದ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕವಷ್ಟೇ ಅದನ್ನು ಕಾರ್ಯಗತಗೊಳಿಸಬಹುದಾಗಿದೆ ಎಂದು ಹೇಳುವ ಮೂಲಕ ಚುನಾವಣಾ ಆಯೋಗ ಪರೋಕ್ಷವಾಗಿ ಈ ಕಲ್ಪನೆಯನ್ನು ಬೆಂಬಲಿಸುವುದಾಗಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ  ವಿಶ್ವ ಚುನಾವಣಾ ಸಂಸ್ಥೆಗಳ ಸಂಘದ 4ನೇ ಸಾಮಾನ್ಯ ಸಭೆಯ ಸಮಾರೋಪ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಇವಿಎಂ ತಿರುಚಲು ಯಾರಿಗೂ ಸಾಧ್ಯವಿಲ್ಲ. ಅವುಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ. ಈ ಮತಯಂತ್ರಗಳ ಬಗ್ಗೆ ಯಾರೂ ಸಹ ಅನುಮಾನಿಸಬಾರದು ಎಂದರು.

ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ ಅಂತಿಮ ಪಟ್ಟಿಯಲ್ಲಿ ಹೆಸರು ಇಲ್ಲದವರು ಮೊದಲಿನಂತೆ ಮುಂದೆಯೂ ತಮ್ಮ ಹಕ್ಕನ್ನು ಹೊಂದಿರುತ್ತಾರೆ ಎಂದು ಕೇಂದ್ರ ಗೃಹಸಚಿವಾಲಯ ಈಗಾಗಲೇ ಸ್ಪಷ್ಟಪಡಿಸಿದ್ದು, ನ್ಯಾಯಮಂಡಳಿ ತೀರ್ಮಾನಿಸುವವರೆಗೂ ಎನ್ ಆರ್ ಸಿಯಿಂದ ಹೆಸರು ಕೈ ಬಿಟ್ಟವರು ಕೂಡಾ ಚುನಾವಣಾ ಸಮಯದಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT