ಎಂ. ನಂಜುಂಡಸ್ವಾಮಿ 
ರಾಜ್ಯ

ಪತ್ರಿಕೋದ್ಯಮದ ಜಿ ಸಂತಾ ಪ್ರಶಸ್ತಿಗೆ ಎಂ. ನಂಜುಂಡಸ್ವಾಮಿ ಆಯ್ಕೆ!

ಪತ್ರಿಕೋದ್ಯಮ ವಿಭಾಗದಲ್ಲಿ ನೀಡುವ ಜಿ ಸಂತಾ ಟೀಚರ್ ಮೆಮೋರಿಯಲ್ ಪ್ರಶಸ್ತಿಗೆ ವಿಜಯ ಕರ್ನಾಟಕದ ಮೈಸೂರು ಬ್ಯೂರೋದ ಪತ್ರಕರ್ತ ಎಂ. ನಂಜುಂಡಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು: ಪತ್ರಿಕೋದ್ಯಮ ವಿಭಾಗದಲ್ಲಿ ನೀಡುವ ಜಿ ಸಂತಾ ಟೀಚರ್ ಮೆಮೋರಿಯಲ್ ಪ್ರಶಸ್ತಿಗೆ ವಿಜಯ ಕರ್ನಾಟಕದ ಮೈಸೂರು ಬ್ಯೂರೋದ ಪತ್ರಕರ್ತ ಎಂ. ನಂಜುಂಡಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದ ಸಾಧನೆ ಗುರುತಿಸಿ ಬೆಂಗಳೂರಿನ Inspired Indian Foundation(IIF) ಈ ಪ್ರಶಸ್ತಿಯನ್ನು ನೀಡುತ್ತದೆ. ಪ್ರಶಸ್ತಿಯೂ 22 ಸಾವಿರ ರು. ನಗದು, ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಒಳಗೊಂಡಿರುತ್ತದೆ. ಬೆಂಗಳೂರಿನಲ್ಲಿ ಅಕ್ಟೋಬರ್ 19ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

2019ರ ಸಾಲಿನ 4ನೇ ಜಿ ಸಂತಾ ಟೀಚರ್ ಮೆಮೋರಿಯಲ್ ಪತ್ರಿಕೋದ್ಯಮ ಪ್ರಶಸ್ತಿಗೆ ಎಂ. ನಂಜುಂಡಸ್ವಾಮಿ ಆಯ್ಕೆಯಾಗಿದ್ದಾರೆ.

ನಿಷ್ಪಕ್ಷಪಾತ ಎಡಿಟಿಂಗ್, ಸಹೋದ್ಯೋಗಿಗಳೊಂದಿಗಿನ ಸೌಹಾರ್ದ ಸಂಬಂಧ ಮತ್ತು ಇತರೇ ಅಂಶಗಳನ್ನು ಮನಗಂಡು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. 

ಕೇರಳದಲ್ಲಿ ಹೆಸರು ಮಾಡಿದ್ದ ಶಿಕ್ಷಕ, ಇಂಗ್ಲಿಷ್ ಸಾಹಿತ್ಯದಲ್ಲಿ ಹೆಸರು ಮಾಡಿದ್ದ ಜಿ ಸಂತಾ ಅವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜಿ ಸಂತಾ ತಮ್ಮ 65ನೇ ವಯಸ್ಸಿನಲ್ಲಿ(2007) ನಿಧನರಾದರು. ನಂತರ ವಿಜ್ಞಾನಿ ಅಬ್ದುಲ್ ಕಲಾಂ ಅವರ ಆಶೀರ್ವಾದೊಂದಿಗೆ ಪ್ರಶಸ್ತಿಯನ್ನು ಆರಂಭ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT