ಮಂಡ್ಯ: 100 ರು, ಕೂಲಿ ಬಾಕಿ ನೀಡಿಲ್ಲವೆಂದು ಆಳುಗಳಿಂದ ರೈತನ ಬರ್ಬರ ಹತ್ಯೆ! 
ರಾಜ್ಯ

ಮಂಡ್ಯ: 100 ರು. ಕೂಲಿ ಬಾಕಿ ನೀಡಿಲ್ಲವೆಂದು ಆಳುಗಳಿಂದ ರೈತನ ಬರ್ಬರ ಹತ್ಯೆ!

ಕೇವಲ 100 ರು. ಕೂಲಿ ಬಾಕಿ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಳುಗಳೇ ರೈತನೊಬ್ಬನ ಬರ್ಬರ ಕೊಲೆ ಮಾಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಕೇವಲ 100 ರು. ಕೂಲಿ ಬಾಕಿ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಳುಗಳೇ ರೈತನೊಬ್ಬನ ಬರ್ಬರ ಕೊಲೆ ಮಾಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಟಹಳ್ಳಿ ಗ್ರಾಮದ ಬಸವರಾಜು (40) ಎಂಬಾತ ಮೃತಪಟ್ಟ ರೈತನಾಗಿದ್ದು ಕೂಲಿ ಬಾಕಿ ನೀಡುವ ವಿಚಾರದಲ್ಲಿ ಆಳುಗಳ ಃಆಗೂ ಬಸವರಾಜು ನಡುವೆ ಗಲಾಟೆಯಾಗಿ ಆಳುಗಳಾದ ಶಿವು,ನಾಗರಾಜು ಮತ್ತು ಗವಿರಂಗೇಗೌಡ ಬಸವರಾಜು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ರೈತ ಬಸವರಾಜು ತನ್ನ ಗದ್ದೆಯಲ್ಲಿ ಕೆಲಸ ಮಾಡುವ ಆಳುಗಳಿಗೆ 500 ರು. ಕೂಲಿ ನೀಡುವುದಾಗಿ ಹೇಳಿದ್ದು ಅದರಲ್ಲಿ 400 ರು. ನೀಡಿದ್ದಾನೆ. ಮತ್ತೆ ಬಾಕಿ 100 ಸಂಜೆ ನೀಡುವುದಾಗಿ ಹೇಳಿದ್ದಾನೆ. ಆದರೆ ಸಂಜೆ ವೇಳೆ ಬಾಕಿ ಮೊತ್ತಕ್ಕಾಗಿ ಬಸವರಾಜು ಹಾಗೂ ಆಳುಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಳುಗಳು ಬಸವರಾಜು ಮೇಲೆ ಹಲ್ಲೆ ಮಾಡಿದ್ದು ಪಕ್ಕದ ಲಾರಿಯಲ್ಲಿದ್ದ ಕಬ್ಬಿನ ಜಲ್ಲೆಯಿಂದ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ್ದಾರೆ. 

ಹಲ್ಲೆಯಿಂದ ಗಾಯಗೊಂಡಿದ್ದ ಬಸವರಾಜುವನ್ನು ಕೂಡಲೇ ಗ್ರಾಮನ್ಸ್ಥರು ಕಿಕ್ಕೇರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT