ಯಡಿಯೂರಪ್ಪ 
ರಾಜ್ಯ

ನಗರ ಪ್ರದಕ್ಷಿಣೆ ಮಾಡಿದ ಸಿಎಂ ಯಡಿಯೂರಪ್ಪ; ಎಲ್ಲೆಡೆ ಸಮಸ್ಯೆಗಳ ದರ್ಶನ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು.

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ ಬಸ್‌ನಲ್ಲಿ ಹೊರಟ ಮುಖ್ಯಮಂತ್ರಿ ನಗರದ ಹಲವೆಡೆ ತೆರಳಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ, ಜನರ ಸಮಸ್ಯೆ ಆಲಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಪ್ರತೀ 15 ದಿನಗಳಿಗೊಮ್ಮೆ ನಗರ ಪ್ರದಕ್ಷಿಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಗೃಹಕಚೇರಿ‌ ಕೃಷ್ಣಾದಿಂದ ಪರಿವೀಕ್ಷಣೆ ಆರಂಭಿಸಿದ ಯಡಿಯೂರಪ್ಪ ಅವರಿಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಆರ್.ಅಶೋಕ್, ಶಾಸಕರಾದ ಅರವಿಂದ್ ಲಿಂಬಾವಳಿ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದು, ಬಸ್ ಗಳಲ್ಲಿ ಪರಿವೀಕ್ಷಣೆ ನಡೆಸಿದರು. ಮುಖ್ಯಮಂತ್ರಿಗಳ ನಗರ ಪರಿವೀಕ್ಷಣೆ ನಡೆಸುವ ಸ್ಥಳಗಳಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.

ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ವರೆಗಿನ ಮೆಟ್ರೋ ‌ಕಾಮಗಾರಿ ಪರಿವೀಕ್ಷಿಸಿ ಕೆ.ಆರ್.ಪುರಂ ರೈಲ್ವೆ ನಿಲ್ದಾಣ ಪರಿಶೀಲನೆ‌ ನಡೆಸಿ ಈ ಸಂಬಂಧ ಅಧಿಕಾರಿಗಳೊಂದಿಗೆ ಯಡಿಯೂರಪ್ಪ ಚರ್ಚೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು- ಸದ್ಗುರು

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?