ಸಂಗ್ರಹ ಚಿತ್ರ 
ರಾಜ್ಯ

15 ದಿನಗಳ ಅಂತರದಲ್ಲಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು

ಕೊಡವರ ಪವಿತ್ರ ತಾಣ, ಪ್ರವಾಸಿಗರ ನೆಚ್ಚಿನ ತಾಣ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ಮಡಿಕೇರಿ: ಕೊಡವರ ಪವಿತ್ರ ತಾಣ, ಪ್ರವಾಸಿಗರ ನೆಚ್ಚಿನ ತಾಣ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ಕಳೆದ 15 ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ಕಾವೇರಿ ತಾಯಿ ಉಗಮಸ್ಥಾನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಬಳಿಕ ಮಳೆ ಪ್ರಮಾಣ ತಗ್ಗಿದಂತೆಯೇ ಬಿರುಕು ಕೂಡ ಮುಚ್ಚಲ್ಪಟ್ಟಿತ್ತು.  ಈ ಹಿನ್ನೆಲೆಯಲ್ಲಿ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ವಿಜ್ಞಾನಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದರು.  ಆದರೀಗ ಮತ್ತೆ ಈ ಬೆಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು, ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ. ಈ ಬಿರುಕು 15 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಬಿರುಕಿಗಿಂತಲೂ ದೊಡ್ಡದಾಗಿದೆ ಎಂದು ಇಲ್ಲಿನ ಪ್ರವಾಸಿಗರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತಂತೆ ಸ್ಥಳೀಯರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ತಲಕಾವೇರಿಯಿಂದ ಒಂದು ಕಿ.ಮೀ ಮುಂದೆ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದಲೇ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಲ್ಲದೆ ಈ ಹಿಂದೆ ಅಂದರೆ 2014ರಲ್ಲಿ ಸಾರ್ವಜನಿಕರ ಅಭಿಪ್ರಾಯದಂತೆ ಅರಣ್ಯ ಇಲಾಖೆಯಿಂದ ಬ್ರಹ್ಮಗಿರಿ ಬೆಟ್ಟದಲ್ಲಿ ಇಂಗು ಗುಂಡಿಗಳನ್ನು ಅಲ್ಲಲ್ಲಿ ತೆಗೆಯಲಾಯಿತು. ಅಲ್ಲದೆ ಅರಣ್ಯ ಸಸಿಗಳನ್ನು ನೆಡಲಾಯಿತು. ಅರಣ್ಯ-ತೋಪು ಮತ್ತು ಇಂಗು ಗುಂಡಿಗಳ ಸಲುವಾಗಿ ಹಿಟಾಚಿ ಹಾಗೂ ಜೆಸಿಬಿ ಯಂತ್ರಗಳನ್ನು ಬಳಸಲಾಯಿತು. ಇದೇ ರೀತಿಯ ಕಾರ್ಯ 2016ರವರೆಗೂ ಮುಂದುವರಿಯಿತು. ಬ್ರಹ್ಮಗಿರಿ ಬೆಟ್ಟದಲ್ಲಿ ಈ ಯಂತ್ರಗಳನ್ನು ಬಳಸಿದ ಹಿನ್ನೆಲೆಯಲ್ಲಿ ನೆಲದ ಮಣ್ಣಿನ ಪದರ ಸಡಿಲಗೊಂಡು ಈಗಿನ ಮಳೆಯ ಸಂದರ್ಭ ಬೆಟ್ಟ ಬಿರುಕು ಬಿಟ್ಟು ಈ ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಅನಿಸಿಕೆ ವ್ಯಕ್ತಪಡಿಸುತ್ತಿದ್ದಾರೆ.

15 ದಿನಗಳ ಹಿಂದೆಯೂ ಭೂಮಿ ಬಿರುಕು ಬಿಟ್ಟಿದ್ದು, ಈಗ ಮತ್ತೆ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಮಿ ಬಿರುಕುಬಿಟ್ಟಿದೆ. ಬೆಟ್ಟದ ಮೇಲ್ಭಾಗದಲ್ಲಿ 10 ಅಡಿಗೂ ಹೆಚ್ಚು ಉದ್ದ ಆಳದ ಕಂದಕ ಸೃಷ್ಟಿಯಾಗಿದ್ದು, ಸಾರ್ವಜನಿಕರು ಕಾವೇರಿ ತಾಯಿಯ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT