ಜಿ.ಪರಮೇಶ್ವರ್ 
ರಾಜ್ಯ

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಡಿಸಿಎಂ ಪರಮೇಶ್ವರ್​ಗೆ ನೋಟಿಸ್

ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.

ಸದಾಶಿವನಗರದ ಎರಡನೇ ಹಂತದ  ಮನೆ ಸಂಖ್ಯೆ 94/ಎ ರಾಜಮಹಲ್​ ವಿಲಾಸ್​ ಮನೆಯನ್ನು ಈ ಹಿಂದೆ ಮೈತ್ರಿ ಸರ್ಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಡಿಸಿಎಂ ಪರಮೇಶ್ವರ್​ಗೆ ಹಂಚಿಕೆ ಮಾಡಲಾಗಿತ್ತು. ಪ್ರಸ್ತುತ ಈ ಮನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ್​ ಬೊಮ್ಮಯಿ ಅವರ ಕಚೇರಿ ಉಪಯೋಗಕ್ಕೆ ಹಂಚಿಕೆ ಮಾಡಲಾಗಿದ್ದು, ನಿವಾಸವನ್ನು ಕೂಡಲೇ ಖಾಲಿ ಮಾಡುವಂತೆ ಪರಮೇಶ್ವರ್ ಅವರಿಗೆ ಸೂಚಿಸಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಒಂದೂವರೆ ತಿಂಗಳು ಕಳೆದಿದ್ದರೂ, ಪರಮೇಶ್ವರ್​ ಮಾತ್ರ ಇನ್ನೂ ಮನೆ ಖಾಲಿ ಮಾಡಿಲ್ಲ. ಈ ಹಿನ್ನೆಲೆ ಒಂದುವಾರದೊಳಗೆ ಮನೆಯನ್ನು ಖಾಲಿ ಮಾಡುವಂತೆ ಬಿಡಿಎ ಸೂಚನೆ ನೀಡಿದೆ.

ಜೊತೆಗೆ ವಿದ್ಯುಚ್ಛತ್ತಿ ವೆಚ್ಚ ಹಾಗೂ ನೀರಿನ ವೆಚ್ಚವನ್ನು ಸಂಬಂಧಿಸಿದ ಇಲಾಖೆಗೆ ಪಾವತಿಸಿದ ಬಿಲ್ಲುಗಳ ಜೊತೆಗೆ ಪ್ರಾಧಿಕಾರದ ಸುಪರ್ದಿಗೆ ವಹಿಸುವಂತೆ ನೊಟೀಸಿನಲ್ಲಿ ಉಲ್ಲೇಖ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT