ಜಿ.ಪರಮೇಶ್ವರ್ 
ರಾಜ್ಯ

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಡಿಸಿಎಂ ಪರಮೇಶ್ವರ್​ಗೆ ನೋಟಿಸ್

ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.

ಸದಾಶಿವನಗರದ ಎರಡನೇ ಹಂತದ  ಮನೆ ಸಂಖ್ಯೆ 94/ಎ ರಾಜಮಹಲ್​ ವಿಲಾಸ್​ ಮನೆಯನ್ನು ಈ ಹಿಂದೆ ಮೈತ್ರಿ ಸರ್ಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಡಿಸಿಎಂ ಪರಮೇಶ್ವರ್​ಗೆ ಹಂಚಿಕೆ ಮಾಡಲಾಗಿತ್ತು. ಪ್ರಸ್ತುತ ಈ ಮನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ್​ ಬೊಮ್ಮಯಿ ಅವರ ಕಚೇರಿ ಉಪಯೋಗಕ್ಕೆ ಹಂಚಿಕೆ ಮಾಡಲಾಗಿದ್ದು, ನಿವಾಸವನ್ನು ಕೂಡಲೇ ಖಾಲಿ ಮಾಡುವಂತೆ ಪರಮೇಶ್ವರ್ ಅವರಿಗೆ ಸೂಚಿಸಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಒಂದೂವರೆ ತಿಂಗಳು ಕಳೆದಿದ್ದರೂ, ಪರಮೇಶ್ವರ್​ ಮಾತ್ರ ಇನ್ನೂ ಮನೆ ಖಾಲಿ ಮಾಡಿಲ್ಲ. ಈ ಹಿನ್ನೆಲೆ ಒಂದುವಾರದೊಳಗೆ ಮನೆಯನ್ನು ಖಾಲಿ ಮಾಡುವಂತೆ ಬಿಡಿಎ ಸೂಚನೆ ನೀಡಿದೆ.

ಜೊತೆಗೆ ವಿದ್ಯುಚ್ಛತ್ತಿ ವೆಚ್ಚ ಹಾಗೂ ನೀರಿನ ವೆಚ್ಚವನ್ನು ಸಂಬಂಧಿಸಿದ ಇಲಾಖೆಗೆ ಪಾವತಿಸಿದ ಬಿಲ್ಲುಗಳ ಜೊತೆಗೆ ಪ್ರಾಧಿಕಾರದ ಸುಪರ್ದಿಗೆ ವಹಿಸುವಂತೆ ನೊಟೀಸಿನಲ್ಲಿ ಉಲ್ಲೇಖ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT