'ಮೌನ ಮುರಿದು ಮಾತನಾಡು ಒಮ್ಮೆ,'-ವಿಕ್ರಮ್ ಲ್ಯಾಂಡರ್ ಗೆ ಪದ್ಯದ ಮೂಲಕ ಬೆಂಗಳೂರು ಪೋಲೀಸರ ಮನವಿ! 
ರಾಜ್ಯ

'ಮೌನ ಮುರಿದು ಮಾತನಾಡು ಒಮ್ಮೆ': ವಿಕ್ರಮ್ ಲ್ಯಾಂಡರ್ ಗೆ ಪದ್ಯದ ಮೂಲಕ ಬೆಂಗಳೂರು ಪೋಲೀಸರ ಮನವಿ!

ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 2 ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದಿದ್ದರೂ ಸಂಪರ್ಕ ಸಾಧ್ಯವಾಗದೆ ಹೋಗಿದ್ದು  ಇಸ್ರೋ ಸಂಶೋಧಕರು ಸಂಪರ್ಕ ಮರುಸ್ಥಾಪನೆಗೆ ಸತತ ಯತ್ನ ಮಾಡುತ್ತಿದ್ದಾರೆ. ಈ ನಡುವೆ ಬೆಂಗಳೂರು ನಗರ ಪೋಲೀಸರು ವಿಕ್ರಮ್ ಲ್ಯಾಂಡರ್ ಗಾಗಿ ವಿಶೇಷ ಪದ್ಯ ಬರೆದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳೂರು: ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 2 ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದಿದ್ದರೂ ಸಂಪರ್ಕ ಸಾಧ್ಯವಾಗದೆ ಹೋಗಿದ್ದು  ಇಸ್ರೋ ಸಂಶೋಧಕರು ಸಂಪರ್ಕ ಮರುಸ್ಥಾಪನೆಗೆ ಸತತ ಯತ್ನ ಮಾಡುತ್ತಿದ್ದಾರೆ. ಈ ನಡುವೆ ಬೆಂಗಳೂರು ನಗರ ಪೋಲೀಸರು ವಿಕ್ರಮ್ ಲ್ಯಾಂಡರ್ ಗಾಗಿ ವಿಶೇಷ ಪದ್ಯ ಬರೆದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳುರು ನಗರ ಪೋಲೀಸ್ ಅಧಿಕೃತ ಟ್ವಿಟ್ತರ್ ಖಾತೆಯಲ್ಲಿ ವಿಕ್ರಮ್ ಗಾಗಿ ಬರೆದ ಪದ್ಯವನ್ನು ಬರೆಯಲಾಗಿದೆ.

"ಪ್ರೀತಿಯ ವಿಕ್ರಮ್,

ಹಗಲಿರುಳ  ಶ್ರಮದ ಫಲ ನೀನು,
ನಿನ್ನ ಮಾತಿಗಾಗಿ ಕಾಯುತಿರುವೆ ನಾನು!
ಮೌನ ಮುರಿದು ಮಾತನಾಡು ಒಮ್ಮೆ,,
ಆಗುವುದೆಲ್ಲ ಆಗೇ ಬಿಡಲಿ ನಾನಿರುವೆ!"

ಎಂದು ಬರೆದು ಕೆಳಗೆ ಇಂತಿ ನಿನ್ನ ಭಾರತಾಂಬೆ ಎಂದು ಸಹಿ ಹಾಕಲಾಗಿದೆ.

ನಿನ್ನೆಯಷ್ಟೇ ಮಹಾರಾಷ್ಟ್ರದ ನಾಗಪುರ ಪೋಲೀಸರು ವಿಕ್ರಮ್ ಲ್ಯಾಂಡರ್ ಗೆ ದಯವಿಟ್ಟು ಪ್ರತಿಕ್ರಯಿಸು, ಸಿಗ್ನಲ್ ಬ್ರೇಕ್ ಮಾಡಿದ್ದಕ್ಕೆ ನಾವು ನಿನಗೆ ದಂಡ ಹಾಕಲ್ಲ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದು ಸಾಮಾಜಿಕ ತಾಣದಲ್ಲಿ ಬಹುವಿಧದ ಪ್ರತಿಕ್ರಿಯೆಗೆ ಕಾರಣವಾಗಿತ್ತು ಎಂದು ನಾವಿಲ್ಲಿ ನೆನೆಯಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT