ರಾಜ್ಯ

ಅನರ್ಹ ಶಾಸಕರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ

Shilpa D

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ವಿರುದ್ಧ ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಅನರ್ಹ ಶಾಸಕರ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ.

ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಜೆಡಿಎಸ್ 17 ಕ್ಷೇತ್ರಗಳ ಪೈಕಿ ಜೆಡಿಎಸ್ ತೆಕ್ಕೆಯಲ್ಲಿರುವ ಮೂರು ಕೆ.ಆರ್.ಪೇಟೆ, ಹುಣಸೂರು ಹಾಗೂ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ

ಸಮಾವೇಶ ನಡೆಸುವ ಮೂಲಕ ಪಕ್ಷದ ಬಲಾಬಲ ಪ್ರದರ್ಶನ ಹಾಗೂ ಕ್ಷೇತ್ರದಲ್ಲಿನ ವಾಸ್ತವ ಸ್ಥಿತಿ ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ 12 ರಂದು ಕೆ.ಆರ್.ಪೇಟೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ

SCROLL FOR NEXT