ಮೋದಿ ಸರ್ಕಾರದ ಸಾಧನೆ ಪ್ರದರ್ಶಿಸಲಿದೆ ದಸರಾ ಜಂಬೂ ಸವಾರಿ 
ರಾಜ್ಯ

ಮೋದಿ ಸರ್ಕಾರದ ಸಾಧನೆ ಪ್ರದರ್ಶಿಸಲಿದೆ ದಸರಾ ಜಂಬೂ ಸವಾರಿ

ಮೈಸೂರಿನಲ್ಲಿ ಅ. 8ರಿಂದ ನಡೆಯಲಿರುವ ಐತಿಹಾಸಿಕ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳನ್ನು ಪ್ರದರ್ಶಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಅ. 8ರಿಂದ ನಡೆಯಲಿರುವ ಐತಿಹಾಸಿಕ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳನ್ನು ಪ್ರದರ್ಶಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳು, ಮೈಸೂರು ರಾಜಮನೆತನದ ಕೊಡುಗೆಗಳು, ದಿವಂಗತ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಸುತ್ತೂರು ಸ್ವಾಮಿಗಳ ಸಾಧನೆಗಳ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಲಾಗುವುದು ಎಂದು ಮಾಹಿತಿ ನೀಡಿದರು.

ಅ.1ರಂದು ಮೈಸೂರು ದಸರಾ ಕ್ರೀಡಾಕೂಟ ಹಾಗೂ ಯುವ ದಸರಾವನ್ನು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು ಉದ್ಘಾಟಿಸುವ ನಿರೀಕ್ಷೆಯಿದೆ ಎಂದರು. ಇದಕ್ಕೂ ಮುನ್ನ ಸಚಿವರು, ಸಂಪ್ರದಾಯದಂತೆ ಅರಮನೆಯ ಲಾಯದ ಬಳಿ ಮಾವುತರು ಹಾಗೂ ಕವಾಡಿಗ ಕುಟುಂಬ ಸದಸ್ಯರ ಜೊತೆಗೆ ಉಪಹಾರ ಸೇವಿಸಿ, ಅವರಿಗೆ ಸಮವಸ್ತ್ರ, ಛತ್ರಿ, ರೈನ್ ಕೋಟ್ , ನೀರಿನ ಬಾಟಲ್ ಗಳು , ಟಾರ್ಚ್ ಮತ್ತು ಶೂಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT