ರಾಜ್ಯ

ಡಿ.ಕೆ. ಶಿವಕುಮಾರ್‌ ಬಂಧನ ರಾಜಕೀಯವಾಗಿ ತುಳಿಯುವ ಹುನ್ನಾರ: ಕರ್ನಾಟಕ ರಕ್ಷಣಾ ವೇದಿಕೆ

Manjula VN

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ‌ಕುತಂತ್ರ ಮಾಡಿ‌ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದರೂ ಅನಗತ್ಯವಾಗಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿರುವುದು ಸ್ಪಷ್ಟ. ‌ಇಂದು ನಡೆಯುವ ಹೋರಾಟದಲ್ಲಿ ಸಮುದಾಯದ ನಾಯಕನಾಗಿ ನಾನು ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಇಂದು ಒಕ್ಕಲಿಗರ ಸಂಘ, ಕಾಂಗ್ರೆಸ್ ,ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಹಾಗಾಗಿ, ಒಬ್ಬ ಸಮುದಾಯದ ಮುಖಂಡನಾಗಿ ಭಾಗವಹಿಸುತ್ತಿದ್ದೇನೆ. ಆದರೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಈ ಹೋರಾಟಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

SCROLL FOR NEXT