ಮನ್ಸೂರ್ ಖಾನ್ 
ರಾಜ್ಯ

ಐಎಂಎ ವಂಚನೆ: ಪ್ರಭಾವಿ ರಾಜಕಾರಣಿ, ಅಧಿಕಾರಿಗಳಿಂದ ಸಾಕ್ಷ್ಯ ನಾಶಕ್ಕೆ ಯತ್ನ-ಮನ್ಸೂರ್ ಖಾನ್

ಪ್ರಭಾವಿ ರಾಜಕಾರಣಿ ಹಾಗೂ ಐಎಎಸ್ ಅಧಿಕಾರಿಗಳು ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆಗಳನ್ನು ನಾಶಪಡಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎಂದು ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ರೂವಾರಿ ಮೊಹ್ಮದ್ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಗಂಭೀರ ಆರೋಪ ಮಾಡಿದ್ದಾರೆ

ಬೆಂಗಳೂರು:  ಪ್ರಭಾವಿ ರಾಜಕಾರಣಿ ಹಾಗೂ ಐಎಎಸ್ ಅಧಿಕಾರಿಗಳು ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆಗಳನ್ನು ನಾಶಪಡಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎಂದು ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ರೂವಾರಿ ಮೊಹ್ಮದ್ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಗಂಭೀರ ಆರೋಪ ಮಾಡಿದ್ದಾರೆ

ತಾನು ಪ್ರಭಾವಿ ರಾಜಕಾರಣಿ ಹಾಗೂ ಐಎಎಸ್ ಅಧಿಕಾರಿಗಳಿಗೆ ಯಾವಾಗ, ಎಷ್ಟು ಲಂಚ ನೀಡಿದ್ದೇನೆ ಎಂಬುದರ ಕುರಿತು ವಿಡಿಯೋ ಸಹಿತ ಹಲವು ದಾಖಲೆಗಳನ್ನು ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟಿದ್ದೆ. ಆದರೆ, ಆ ದಾಖಲೆಗಳನ್ನೀಗ ವ್ಯವಸ್ಥಿತವಾಗಿ ನಾಶ ಮಾಡಲಾಗಿದೆ ಎಂದು ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಆರೋಪಿಸಿದ್ದಾರೆ 

ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸತ್ಯಾಂಶವನ್ನು ಕಲೆ ಹಾಕಲು 12 ಜನರ ಮಲ್ಟಿ ಡಿಸಿಪ್ಲೇನರಿ ತನಿಖಾ ತಂಡ  ರಚಿಸಿದ್ದು, ಇದರಲ್ಲಿ ಚಾರ್ಟರ್ಡ್ ಅಕೌಂಟೆಂಟ್, ವಿಧಿ ವಿಜ್ಞಾನ ಅಧಿಕಾರಿ, ಕಂಪ್ಯೂಟರ್ ವಿಧಿ ವಿಜ್ಞಾನ ತಜ್ಞರು ಹಾಗೂ ಬ್ಯಾಂಕಿಂಗ್ ಸಂಬಂಧಿಸಿದ ಚಾಣಾಕ್ಷ ಅಧಿಕಾರಿಗಳು ಇದ್ದಾರೆ. 

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಮನ್ಸೂರ್ ಖಾನ್ ಸೇರಿ ಹದಿನೈದು ಆರೋಪಿಗಳು ಮತ್ತು ಐದು ಕಂಪನಿಗಳ ವಿರುದ್ಧ ಸಿಬಿಐ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT