ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಅಸಮರ್ಪಕ ಡಯಾಲಿಸಿಸ್ ಘಟಕ, 16 ವರ್ಷದ ಬಾಲಕ ದುರ್ಮರಣ

ಇಲ್ಲಿನ ಹಳೆಯ ಜಿಲ್ಲಾಸ್ಪತ್ರೆಯಲ್ಲಿನ  ಡಯಾಲಿಸಿಸ್ ಘಟಕದ ತಾಂತ್ರಿಕ ತೊಂದರೆಯಿಂದಾಗಿ  16 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಇತರ ಮೂವರು ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ.

ಕಲಬುರಗಿ: ಇಲ್ಲಿನ ಹಳೆಯ ಜಿಲ್ಲಾಸ್ಪತ್ರೆಯಲ್ಲಿನ  ಡಯಾಲಿಸಿಸ್ ಘಟಕದ ತಾಂತ್ರಿಕ ತೊಂದರೆಯಿಂದಾಗಿ  16 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಇತರ ಮೂವರು ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ.

ಮೃತನನ್ನು ಶಾಹಬಾದ್ ಪಟ್ಟಣದ ಆಕಾಶ್ ಬಡಿಗೇರ್  ಎಂದು ಗುರುತಿಸಲಾಗಿದೆ. ಗುರಣ್ಣ, ರಾಜೇಂದ್ರ ಹಾಗೂ ಸಿಂಗೊಡಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ. ಶಿವಾನಂದ್ ಸುರ್ಗಾಲಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 14 ಡಯಾಲಿಸಿಸ್  ಹಾಸಿಗೆಗಳಿದ್ದು, ಅವುಗಳಲ್ಲಿ 13 ರೋಗಿಗಳಿಗೆ ಲಭ್ಯವಾಗಿವೆ. ಡಯಾಲಿಸಿಸ್ ರೋಗಿಗಳಿಗೆ ಮೂರು ಪಾಳಿಯಲ್ಲಿ ಉಚಿತವಾಗಿ  ಚಿಕಿತ್ಸೆ ನೀಡಲಾಗುತ್ತಿದೆ, ಬೆಳಗ್ಗೆ ಹಾಗೂ ಎರಡನೇ ಸೆಷನ್ಸ್  ವೇಳೆಗೆ ಯಾವುದೇ ತೊಂದರೆ ಇರಲಿಲ್ಲ ಆದರೆ, 3-30ರಿಂದ 4 ಗಂಟೆ ಸಂದರ್ಭದಲ್ಲಿ ತೊಂದರೆ ಉಂಟಾಯಿತು. ಎಲ್ಲಾ 13 ರೋಗಿಗಳಿಗೂ ಕೆಮ್ಮು, ವಾಂತಿ ಹಾಗೂ ಉಸಿರಾಟದ ಸಮಸ್ಯೆ ಆರಂಭವಾಯಿತು ಆಕಾಶ್ ಸ್ಥಳದಲ್ಲಿಯೇ ಮೃತಪಟ್ಟರು. ಉಳಿದ ಮೂವರನ್ನು ಐಸಿಯು ಹಾಗೂ ಇತರ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಸುರ್ಗಾಲಿ ವಿವರಿಸಿದರು.

ಒಂದೇ ವೇಳೆಯಲ್ಲಿ  ಎಲ್ಲ ರೋಗಿಗಳಿಗೂ ತೊಂದರೆ ಕಾಣಿಸಿಕೊಂಡದ್ದು ಅಪರೂಪದ ಪ್ರಕರಣವಾಗಿದೆ ಎಂದು ಡಾ. ಸುರ್ಗಾಲಿ ಹೇಳುತ್ತಾರೆ.

ಬಿಆರ್ ಎಸ್ ಆರೋಗ್ಯ ಮತ್ತು ಸಂಶೋಧನಾ ಸಂಸ್ಥೆಯ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಡಿಯಲ್ಲಿ ಈ ಯೂನಿಟ್ ಕಾರ್ಯನಿರ್ವಹಿಸುತ್ತಿದ್ದು, ಈಗ ಯಾವುದೇ ಚಿಕಿತ್ಸೆ ನೀಡಲಾಗುತ್ತಿಲ್ಲ. ರೋಗಿಗಳನ್ನು ತಾಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್