ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಕನ್ನಡದಲ್ಲಿಲ್ಲ ಐಬಿಪಿಎಸ್ ಪರೀಕ್ಷೆ: ಕೇಂದ್ರದ ವಿರುದ್ಧ ಎಚ್ ಡಿಕೆ ಕಿಡಿ

ಕನ್ನಡಿಗರ ಹಲವು ಬೇಡಿಕೆಗಳ ಹೂರತಾಗಿಯೂ ರಾಷ್ಟ್ರೀಕೃತ ಬ್ಯಾಂಕ್ ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ-ಐಬಿಪಿಎಸ್  ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೇಂದ್ರಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು:  ಕನ್ನಡಿಗರ ಹಲವು ಬೇಡಿಕೆಗಳ ಹೂರತಾಗಿಯೂ ರಾಷ್ಟ್ರೀಕೃತ ಬ್ಯಾಂಕ್ ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ-ಐಬಿಪಿಎಸ್  ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೇಂದ್ರಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪರೀಕ್ಷೆ ಬರೆಯಲು ಈ ಮೊದಲು ಇದ್ದ ಸ್ಥಳೀಯ ( Domicile ) ನಿಯಮವನ್ನು ವಾಪಸ್ ತರಲಾಗಿಲ್ಲ. ಇದೀಗ ಮಾತೃ ಭಾಷೆಯಲ್ಲಿ ಪರೀಕ್ಷೆಯನ್ನು ಬರೆಯಲು ಅನುಮತಿ ಕೊಡದೆ ಇರುವುದು ಕೇಂದ್ರ ಸರ್ಕಾರದ ಮಲತಾಯಿ ಧೋರಣಿಗೆ ಸಾಕ್ಷಿ. ಕೇಂದ್ರದ ಈ ನೀತಿಯನ್ನು ವಿರೋಧಿಸುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಗಳ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ( ಐಬಿಪಿಎಸ್ ) ಗುರುವಾರ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ ಮಾತ್ರ ಈ ಪರೀಕ್ಷೆಗಳನ್ನು ಬರೆಯಬಹುದೆಂದು ಸೂಚಿಸಿದೆ.

ಐಬಿಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿವಿಧ ಕನ್ನಡ ಸಂಘಟನೆಗಳು ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿವೆ.

 ಕೆಲವು ದಿನಗಳ ಹಿಂದೆ ರಾಜ್ಯದ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಬೇಡಿಕೆ ಇಟ್ಟಿದ್ದು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು 13 ಭಾರತೀಯ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದರು.ಆದರೀಗ ಕೇಂದ್ರ ಸರ್ಕಾರ ಹಳೆಯ ಚಾಳಿಯನ್ನು ಮತ್ತೆ ಮುಂದುವರೆಸಿದೆ ಎಂಬ ಟೀಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ