ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ 
ರಾಜ್ಯ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ 

ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿದು ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿದು ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಸವರಾಜ್ ವಿರೇಶ್ ಶಿವುರ (21) ಎಂದು ಗುರುತಿಸಲಾಗಿದೆ.ಕೃತ್ಯ ನಡೆದ ತಕ್ಷಣವೇ ವಿದ್ಯಾರ್ಥಿಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸ್ದ್ದರೂ  ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದವನಾಗಿರುವ ಬಸವರಾಜ್ ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದನು.

ಗುರುವಾರ ಗಣೇಶ್ ವಿಸರ್ಜನೆ ಮೆರವಣಿಗೆ ನೋಡಲು ಸ್ನೇಹಿತರೊಡನೆ ಆಗಮಿಸಿದ್ದ ಬಸವರಾಜ್ ಹರ್ಷ ಕಾಂಪ್ಲೆಕ್ಸ್ ಬಳಿ ಇದ್ದಾಗ ಗಲಾಟೆ ನಡೆದು ದುಷ್ಕರ್ಮಿಗಳು ಬಸವರಾಜ್ ಗೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರ ಗಾಯವಾಗಿದ್ದ ಬಸವರಾಜ್ ನನ್ನು ಕಿಮ್ಸ್ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಿಲ್ಲ. 

ಇನ್ನು ಘಟನೆಯಲ್ಲಿ ಇನ್ನೂ ಐವರಿಗೆ ಗಾಯಗಳಾಗಿದ್ದು ಅವರಿಗೆ ಸಹ ಚಿಕಿತ್ಸೆ ಒದಗಿಸಲಾಗುತ್ತಿದೆ.ಒಟ್ಟಾರೆ ಐದು ಕಡೆ ಚಾಕು ಇರಿತ ಘಟನೆ ನಡೆದಿದೆ. ಹರ್ಷ ಕಾಂಪ್ಲೆಕ್ಸ್, ದುರ್ಗದ ಬೈಲ್, ಸಂಗೊಳ್ಳಿ ರಾಯಣ್ಣ ವೃತ್ತ, ಹಳೆ ಹುಬ್ಬಳ್ಳಿಗಳಲ್ಲಿ ಚಾಕು ಇರಿತದ ಘಟನೆಗಳು ವರದಿಯಾಗಿದೆ. ಘಟನೆ ಕುರಿತಂತೆ ಶಹರ್​ ಉಪನಗರ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT