ಸುರೇಶ್ ಕುಮಾರ್ 
ರಾಜ್ಯ

ಕನ್ನಡದಂತೆ ಹಿಂದಿಗೂ ಮಹತ್ವ ನೀಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್  

ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ: ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಲ್ಲಿನ‌ ನಂದಿಭವನದಲ್ಲಿ ನಡೆದ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ 6ನೇ ರಾಜ್ಯಮಟ್ಟದ ಹಿಂದಿ ಶೈಕ್ಷಣಿಕ ಸಮಾರಂಭ ಮತ್ತು ಹಿಂದಿ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಸುರೇಶ್ ಕುಮಾರ್ ಮಾತನಾಡಿದರು.

ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರಿಗೆ ಹಿಂದಿ ಭಾಷೆ ಸಾಹಿತ್ಯದಲ್ಲಿ ಒಳ್ಳೆಯ ಪಾಂಡಿತ್ಯ ಇತ್ತು. ವಾಜಪೇಯಿ ಅವರಿಂದ ಸ್ಫೂರ್ತಿ ಪಡೆದು ಹಿಂದಿ ಕಲಿತಿದ್ದೇವೆ. ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಅವರು. ಹೀಗಾಗಿ ರಾಜ್ಯದಲ್ಲಿ  ನಮ್ಮ ಮಾತೃಭಾಷೆ ಕನ್ನಡಕ್ಕೆ ನೀಡಿರುವ ಪ್ರಾಮುಖ್ಯತೆಯಂತೆಯೇ ಹಿಂದಿ ಭಾಷೆ ಕಲಿಕೆಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು. 

ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರ ಆದಷ್ಟು ಬೇಗ ಪರಿಹರಿಸುವ ಕೆಲಸ ಮಾಡಲಿದೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT