ಸುರೇಶ್ ಕುಮಾರ್ 
ರಾಜ್ಯ

ಕನ್ನಡದಂತೆ ಹಿಂದಿಗೂ ಮಹತ್ವ ನೀಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್  

ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ: ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಲ್ಲಿನ‌ ನಂದಿಭವನದಲ್ಲಿ ನಡೆದ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ 6ನೇ ರಾಜ್ಯಮಟ್ಟದ ಹಿಂದಿ ಶೈಕ್ಷಣಿಕ ಸಮಾರಂಭ ಮತ್ತು ಹಿಂದಿ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಸುರೇಶ್ ಕುಮಾರ್ ಮಾತನಾಡಿದರು.

ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರಿಗೆ ಹಿಂದಿ ಭಾಷೆ ಸಾಹಿತ್ಯದಲ್ಲಿ ಒಳ್ಳೆಯ ಪಾಂಡಿತ್ಯ ಇತ್ತು. ವಾಜಪೇಯಿ ಅವರಿಂದ ಸ್ಫೂರ್ತಿ ಪಡೆದು ಹಿಂದಿ ಕಲಿತಿದ್ದೇವೆ. ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಅವರು. ಹೀಗಾಗಿ ರಾಜ್ಯದಲ್ಲಿ  ನಮ್ಮ ಮಾತೃಭಾಷೆ ಕನ್ನಡಕ್ಕೆ ನೀಡಿರುವ ಪ್ರಾಮುಖ್ಯತೆಯಂತೆಯೇ ಹಿಂದಿ ಭಾಷೆ ಕಲಿಕೆಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು. 

ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರ ಆದಷ್ಟು ಬೇಗ ಪರಿಹರಿಸುವ ಕೆಲಸ ಮಾಡಲಿದೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT