ರಾಜ್ಯ

ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ?: ಹೆಚ್ ಡಿ ಕುಮಾರಸ್ವಾಮಿ 

Sumana Upadhyaya

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.


ಇದೀಗ ಇಂದು ಮತ್ತೆ ಅಂತಹದ್ದೇ ಆರೋಪವನ್ನು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ವಿರುದ್ಧ ಮಾಡಿದ್ದಾರೆ. ಇಂದು ದೇಶಾದ್ಯಂತ ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡವೂ ಭಾಗವಾಗಿರುವುದರಿಂದ ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ ಎಂದು ಪ್ರಶ್ನೆ ಮಾಡಿದ್ದಾರೆ. 


ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

SCROLL FOR NEXT