ಮೊಬೈಲ್ ಪುಡಿ ಮಾಡಿದ ಪ್ರಿನ್ಸಿಪಾಲ್ 
ರಾಜ್ಯ

ವಿದ್ಯಾರ್ಥಿಗಳ ಮೊಬೈಲ್ ಪುಡಿ ಮಾಡಿದ ಶಿರಸಿ ಪಿಯು ಕಾಲೇಜು ಪ್ರಿನ್ಸಿಪಾಲ್: ವಿಡಿಯೋ ವೈರಲ್

ಮೊಬೈಲ್ ಬಳಕೆಯಿಂದ ಕಲಿಕೆಗೆ ಹಿನ್ನಡೆಯಾಗುತ್ತದೆ ಎಂದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಹೀಗೆ ನಿಷೇಧ ಮಾಡಿದ್ದರೂ ಕದ್ದುಮುಚ್ಚಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ನಿಂತಿಲ್ಲ. ಇಂಥ ವಿದ್ಯಾರ್ಥಿಗಳಿಗೆ ಶಿರಸಿಯ.

ಶಿರಸಿ: ಮೊಬೈಲ್ ಬಳಕೆಯಿಂದ ಕಲಿಕೆಗೆ ಹಿನ್ನಡೆಯಾಗುತ್ತದೆ ಎಂದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಹೀಗೆ ನಿಷೇಧ ಮಾಡಿದ್ದರೂ ಕದ್ದುಮುಚ್ಚಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ನಿಂತಿಲ್ಲ. ಇಂಥ ವಿದ್ಯಾರ್ಥಿಗಳಿಗೆ ಶಿರಸಿಯ ಕಾಲೇಜಿನ ಪ್ರಾಂಶುಪಾಲರೊಬ್ಬರು ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಶಿರಸಿಯ ಎಂಇಎಸ್ ಚೈತನ್ಯ ಪದವಿಪೂರ್ವ ಕಾಲೇಜಿನಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿದ್ದರು. ಈ ವಿಷಯ ಪ್ರಿನ್ಸಿಪಾಲ್ ಆರ್ ಎಂ ಭಟ್ ಅವರ ಗಮನಕ್ಕೂ ಬಂದಿತ್ತು. ಇದಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಯೋಚಿಸಿದ ಅವರು, ವಿದ್ಯಾರ್ಥಿಗಳಿಗೆ ಮೊಬೈಲ್ ಬಗ್ಗೆ ತಿಳಿಸಲು ಸ್ಪೆಷಲ್ ಕ್ಲಾಸ್ ತೆಗೆದುಕೊಂಡಿದ್ದರು,

ನಂತರ ಆಡಿಟೋರಿಯಂ ಗೆ ಬಂದ ವಿದ್ಯಾರ್ಥಿಗಳ ಬಳಿ ಪರಿಶೀಲನೆ ನಡೆಸಿದಾಗ ಒಟ್ಟು 17 ಮೊಬೈಲ್ ಫೋನ್ ಸಿಕ್ಕಿವೆ, ಮೊಬೈಲಿನಿಂದಾಗುವ ದುಷ್ಪರಿಣಾಮದ ಕುರಿತು ತಿಳಿಹೇಳುತ್ತಲೇ ವಿದ್ಯಾರ್ಥಿಗಳ ಎದುರೇ ಮೊಬೈಲ್ ಗಳನ್ನು ಸುತ್ತಿಗೆಯಿಂದ ಕುಟ್ಟಿ ಒಡೆದುಹಾಕಿದ್ದಾರೆ.

ಉಳಿದ 15 ಮೊಬೈಲ್ ಗಳನ್ನ  ಕಾಲೇಜಿನ ಲಾಕರ್ ನಲ್ಲಿಡಲಾಗಿದ್ದು, ವಾರ್ಷಿಕ ಪರೀಕ್ಷೆ ನಂತರ ಕೊಡುವುದಾಗಿ ತಿಳಿಸಿದ್ದಾರೆ,. ಮೊಬೈಲ್ ಪುಡಿ ಮಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ,.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT