ಸೊರಬ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು! 
ರಾಜ್ಯ

ಸೊರಬ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಈಜುಬಾರದೆ ಸಾವನ್ನಪ್ಪಿರುವ ದುರ್ಘಟನೆ ಸೊರಬದ ಉದ್ರಿಯಲ್ಲಿ ಸಂಭವಿಸಿದೆ.

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಈಜುಬಾರದೆ ಸಾವನ್ನಪ್ಪಿರುವ ದುರ್ಘಟನೆ ಸೊರಬದ ಉದ್ರಿಯಲ್ಲಿ ಸಂಭವಿಸಿದೆ.

ವಿನಾಯಕ (16) ಹಾಗೂ ಕಾರ್ತಿಕ್ (16)  ಮೃತಪಟ್ಟ ದುರ್ದೈವಿಗಳು. ಮೃತರು ಉದ್ರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಭಾನುವಾರ ಮಧ್ಯಾಹ್ನ 2 ಗಂಟೆಗೆ ಕೆರೆಗೆ ಈಜಲು ಹೋಗಿದ್ದರು. ಅವರಿಗೆ ಸರಿಯಾಗಿ ಈಜು ಬರುತ್ತಿರಲಿಲ್ಲ. ಆಳವಾದ ನೀರಿನ ಸೆಳೆತಕ್ಕೆ ಸಿಲುಕಿ ಇವರು ಸಾವನ್ನಪ್ಪಿದ್ದಾರೆ.

ನೀರಿನಲ್ಲಿ ತೇಲುತ್ತಿದ್ದ ಶವವನ್ನು ಗ್ರಾಮಸ್ಥರು ದಡಕ್ಕೆ ತಂದರು. ಘಟನಾ ಸ್ಥಳಕ್ಕೆ ಸೊರಬ ಠಾಣೆ ವೃತ್ತ ನಿರೀಕ್ಷಕ ಉಮಾಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT