ಸಿದ್ದರಾಮಯ್ಯ 
ರಾಜ್ಯ

ಬಲವಂತದ ಭಾಷೆ ಹೇರಿಕೆ ಸಲ್ಲದು: ಮಾಜಿ ಸಿಎಂ ಸಿದ್ದರಾಮಯ್ಯ

ಯಾವುದೇ ಭಾಷಾ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಯಾವುದೇ ಭಾಷೆ ಬಲವಂತದ‌ ಹೇರಿಕೆಯಾಗಬಾರದು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಯಾವುದೇ ಭಾಷಾ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಯಾವುದೇ ಭಾಷೆ ಬಲವಂತದ‌ ಹೇರಿಕೆಯಾಗಬಾರದು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ಒಂದೇ ರಾಷ್ಟ್ರಭಾಷೆ ಅಲ್ಲ. ದೇಶದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಲಾಗಿದ್ದು, ಅದರಲ್ಲಿ ಕನ್ನಡವೂ ಒಂದು. ಹಿಂದಿ ಒಂದೇ ಸಾರ್ವಭೌಮ‌ಭಾಷೆ ಅಲ್ಲ‌. ಯಾರೂ ಯಾವ ಭಾಷೆಯನ್ನು ಬೇಕಾದರೂ ಕಲಿಯಬಹುದು, ಆದರೆ ಬಲವಂತದಿಂದ ಇಂತಹದ್ದೇ ಭಾಷೆ ಕಲಿಯಿರಿ ಇದೇ ರಾಷ್ಟ್ರೀಯ ಭಾಷೆ ಎನ್ನುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರವಾಗಲೀ ರಾಜ್ಯದ ಬಿಜೆಪಿ ನಾಯಕರಾಗಲೀ‌ ಸಂತ್ರಸ್ತರಿಗೆ ಭಿಕ್ಷೆ ನೀಡುತ್ತಿಲ್ಲ. ಆದಷ್ಟು ಬೇಗ ಸಮರ್ಪಕ ನೆರೆ ಪರಿಹಾರ‌ ನೀಡಿ,‌ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು, ಪ್ರವಾಹ ಬಂದು 45 ದಿನಗಳಾದರೂ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT