ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರವಾಹಕ್ಕೆ ಬೆಳೆ ಸಂಪೂರ್ಣ ನಾಶ; ಬೇಸತ್ತ ಚಿಕ್ಕಮಗಳೂರಿನ ರೈತ ಗುಂಡಿಕ್ಕಿ ಆತ್ಮಹತ್ಯೆ 

ಇತ್ತೀಚಿನ ಪ್ರವಾಹದಿಂದ ಬೆಳೆಯಲ್ಲಿ ಅಪಾರ ನಷ್ಟ ಅನುಭವಿಸಿದ್ದ ರೈತ ನೊಂದು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಕಳಸದ ಕರಗದ್ದೆ ಗ್ರಾಮದಲ್ಲಿ ನಡೆದಿದೆ. 

ಚಿಕ್ಕಮಗಳೂರು: ಇತ್ತೀಚಿನ ಪ್ರವಾಹದಿಂದ ಬೆಳೆಯಲ್ಲಿ ಅಪಾರ ನಷ್ಟ ಅನುಭವಿಸಿದ್ದ ರೈತ ನೊಂದು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಕಳಸದ ಕರಗದ್ದೆ ಗ್ರಾಮದಲ್ಲಿ ನಡೆದಿದೆ.


ಮೃತ ರೈತನನ್ನು ಚನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಕಳೆದ ತಿಂಗಳು ತೀವ್ರ ಪ್ರವಾಹಕ್ಕೆ 5 ಎಕರೆ ಕಾಫಿ, ಅಡಿಕೆ, ಕಾಳು ಮೆಣಸು ತೋಟ ನೀರಿಗೆ ಕೊಚ್ಚಿ ಹೋಗಿತ್ತು, ಭೂ ಕುಸಿತಕ್ಕೆ ಅವರ ಮನೆ ಕೂಡ ಹಾನಿಗೀಡಾಗಿತ್ತು. 


ಇಷ್ಟೆಲ್ಲ ಘಟನೆಗಳು ಆದ ಬಳಿಕ ಚನ್ನಪ್ಪ ಗೌಡ ತೀವ್ರ ನೊಂದಿದ್ದರು. ಇದರಿಂದಾಗಿಯೇ ಒತ್ತಡಕ್ಕೊಳಗಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.


ಮೃತ ರೈತ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡುತ್ತೇವೆ ಎಂದು ಹೇಳುತ್ತಿದ್ದರೂ ನಮಗೆ ಇದುವರೆಗೆ ಸಿಕ್ಕಿಲ್ಲ, ಅದರಿಂದಲೇ ಪತಿ ತೀವ್ರ ನೊಂದಿದ್ದರು ಎನ್ನುತ್ತಾರೆ ಪತ್ನಿ ನೇತ್ರಾ.


ಕಳಸದಲ್ಲಿ ರೈತ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮ್ಮ ಗಮನಕ್ಕೆ ಬಂದಿದ್ದು ಈ ಬಗ್ಗೆ ವಿವರ ಕೇಳಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸಿಎಂ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT