ವಾಟಲ್ ನಾಗರಾಜ್ 
ರಾಜ್ಯ

ಮೈಸೂರ್ ಪಾಕ್ ನಮ್ದೆ: ತಮಿಳುನಾಡಿಗರಿಗೆ ಚಳಿ ಬಿಡಿಸಿದ ವಾಟಲ್ ನಾಗರಾಜ್!

ಮೈಸೂರು ಪಾಕ್ ಎಂಬುದು ಕೇವಲ ಸಿಹಿ ತಿನಿಸು ಮಾತ್ರವಲ್ಲ. ಇದು ಕನ್ನಡಿಗರ ಭಾವನೆಯೊಂದಿಗೆ ಬೆಸೆದುಕೊಂಡಿದೆ.

ಬೆಂಗಳೂರು: ಮೈಸೂರು ಪಾಕ್ ಎಂಬುದು ಕೇವಲ ಸಿಹಿ ತಿನಿಸು ಮಾತ್ರವಲ್ಲ. ಇದು ಕನ್ನಡಿಗರ ಭಾವನೆಯೊಂದಿಗೆ ಬೆಸೆದುಕೊಂಡಿದೆ.

ಆದರೆ ಕಳೆದ ಎರಡು ವರ್ಷಗಳಿಂದ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ಈ ಮಧ್ಯೆ ತಮಿಳುನಾಡು ಲೇಖಕನೊಬ್ಬ ಮಾಡಿರುವ ಟ್ವೀಟ್ ಕನ್ನಡಿಗರು ಮತ್ತು ತಮಿಳು ಭಾಷಿಕರ ನಡುವೆ ಕಿತ್ತಾಡುಕೊಳ್ಳುವಂತೆ ಮಾಡಿತ್ತು. ಈ ಮಧ್ಯೆ ಕನ್ನಡ ಪರ ಹೋರಾಟಗಾರ ವಾಟಲ್ ನಾಗರಾಜ್ ಅವರು ತಮಿಳುನಾಡು ವಿರುದ್ಧ ತಿರುಗಿಬಿದ್ದಿದ್ದಾರೆ.

ತಮಿಳುನಾಡಿನವರು ಮೈಸೂರ್ ಪಾಕ್ ಅನ್ನು ತಿನ್ನಬೇಕು ಅಂತಾ ಒದ್ದಾಡಬೇಕು. ನಿಮಗೆ ಕಳುಹಿಸುವುದಿಲ್ಲ. ಹುಡುಗಾಟ ಆಡುತ್ತಿದ್ದೀರಾ ನೀವು. ಕಾವೇರಿ ಹೊಯ್ತು ಹೋಗ್ಲಿ, ಮೇಕೆದಾಟು ಸುಮ್ಮನಿದ್ದೀವಿ. ಈಗ ಸ್ವೀಟ್ ಗೂ ಬಂದಿದ್ದೀರಾ. ಚನ್ನಾಗಿದೆ. ಮೈಸೂರ್ ಪಾಕ್ ಹೆಸರು ಬದಲಾವಣೆ ಇಲ್ಲ. ಇಡೀ ಪ್ರಪಂಚದಲ್ಲೇ ಮೈಸೂರ್ ಪಾಕ್, ಮೈಸೂರ್ ಪಾಕ್ ಎಂದು ಹೇಳಿದ್ದಾರೆ. 

ಮೈಸೂರು ಪಾಕ್ ನ ಇತಿಹಾಸ
ಮೈಸೂರು ಪಾಕ್‌ ಮೊದಲು ತಯಾರಾಗಿದ್ದು ಮೈಸೂರು ಅರಮನೆ ಅಡುಗೆಮನೆಯಲ್ಲಿ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಆಳ್ವಿಕೆಯ ಸಂದರ್ಭದಲ್ಲಿ ಅರಮನೆಯ ಅಡುಗೆ ಭಟ್ಟರು ಈ ಸಿಹಿಯನ್ನು ತಯಾರಿಸಿದರು. ಕಡಲೆ ಹಿಟ್ಟಿನ ಜತೆ ತುಪ್ಪ ಮತ್ತು ಸಕ್ಕರೆ ಮಿಶ್ರಣದ ಪಾಕ ತಯಾರಿಸಿ ಅದನ್ನು ಬೇಕೆಂದ ಆಕಾರಕ್ಕೆ ತುಂಬಿದರು. ಒಣಗಿದ ನಂತರ ಅದು ಮಿಠಾಯಿ ರೀತಿಯಲ್ಲಿ ಕಂಡುಬಂತು. ಅದರ ಹೆಸರು ಕೇಳಿದಾಗ, ಮಾದಪ್ಪನವರು ಮನಸ್ಸಿನಲ್ಲಿ ಏನೂ ಆಲೋಚಿಸದ ಅವರು ಇದು ಕೇವಲ 'ಮೈಸೂರು ಪಾಕ್‌' ಎಂದು ಕರೆದರು. (ಪಾಕ್‌ ಅಥವಾ ಪಾಕ, ಎಂದರೆ ಸಂಸ್ಕೃತ ಅಥವಾ ಭಾರತದ ಬೇರೆ ಯಾವುದೇ ಭಾಷೆಗಳಲ್ಲಿ ಸಿಹಿ ಎಂದು ಅರ್ಥ ಕೊಡುತ್ತದೆ). 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT