ಡಿಆರ್ ಡಿಒ ಮಾನವರಹಿತ ವೈಮಾನಿಕ ವಾಹನ ಚಿತ್ರದುರ್ಗದಲ್ಲಿ ಪತನ 
ರಾಜ್ಯ

ಡಿಆರ್ ಡಿಒ ಮಾನವರಹಿತ ವೈಮಾನಿಕ ವಾಹನ ಚಿತ್ರದುರ್ಗದಲ್ಲಿ ಪತನ

(ಡಿಆರ್‌ಡಿಒ) ದೇಶೀಯವಾಗಿ ನಿರ್ಮಿಸಿದ ಮಾನವರಹಿತ ವೈಮಾನಿಕ ವಾಹನ 'ರುಸ್ತುಂ–2' ಚಿತ್ರದುರ್ಗದ ಜೋಡಿ ಚಿಕ್ಕನಹಳ್ಳಿಯಲ್ಲಿ ಪತನವಾಗಿದೆ. 

ಚಿತ್ರದುರ್ಗ: (ಡಿಆರ್‌ಡಿಒ) ದೇಶೀಯವಾಗಿ ನಿರ್ಮಿಸಿದ ಮಾನವರಹಿತ ವೈಮಾನಿಕ ವಾಹನ 'ರುಸ್ತುಂ–2' ಚಿತ್ರದುರ್ಗದ ಜೋಡಿ ಚಿಕ್ಕನಹಳ್ಳಿಯಲ್ಲಿ ಪತನವಾಗಿದೆ. 

ಚಳ್ಳಕೆರೆಯಲ್ಲಿ  ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರದಿಂದ ರುಸ್ತುಂ-2 ಪರೀಕ್ಷಾರ್ಥ ಹಾರಾಟ ನಡೆಸಲಾಗಿತ್ತು. ಮಾನವ ರಹಿತ ವೈಮಾನಿಕ ವಾಹನ ಪತನಗೊಳ್ಳುತ್ತಿದ್ದಂತೆಯೇ ಜೋಡಿ ಚಿಕ್ಕನಹಳ್ಳಿಯ ಗ್ರಾಮಸ್ಥರು ಆತಂಕಗೊಂಡಿದ್ದರು. ವೈಮಾನಿಕ ವಾಹನದಲ್ಲಿದ್ದವರ ರಕ್ಷಣೆಗೆ ಧಾವಿಸಿದ ಗ್ರಾಮಸ್ಥರಿಗೆ ಅಲ್ಲಿ ಯಾವುದೆ ವ್ಯಕ್ತಿ ಇಲ್ಲದ್ದನ್ನು ಕಂಡು ಅಚ್ಚರಿ ಎದುರಾಗಿತ್ತು. 

ಘಟನಾ ಸ್ಥಳಕ್ಕೆ ಡಿಆರ್ ಡಿಒ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸುವ ವೇಳೆಗೆ ಗ್ರಾಮಸ್ಥರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. 

2014 ರ ಡಿಫೆಕ್ಸ್ಪೋ ನಲ್ಲಿ ರುಸ್ತುಂ-2 ನ್ನು ಮೊದಲ ಬಾರಿಗೆ ಪ್ರದರ್ಶಿಸಲಾಗಿತ್ತು. 2018 ರಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಚಳ್ಳಕೆರೆಯಲ್ಲಿ ನಡೆಸಿದ ‘ರುಸ್ತುಂ–2’ ಡ್ರೋನ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿತ್ತು.

ಗಡಿಯಾಚೆ ಬೇಹುಗಾರಿಕೆ ನಡೆಸುವ ಜತೆಗೆ ಶತ್ರು ಪಡೆಗಳನ್ನು ಹೊಡೆದುರುಳಿಸುವ ವಿಶೇಷ ವಿಮಾನ ಇದಾಗಿದೆ. ಸುಮಾರು 200 ಕಿ.ಮೀ ದೂರದವರೆಗಿನ ಪ್ರದೇಶದಲ್ಲಿ ದಿನದ 24 ಗಂಟೆಯೂ ಹದ್ದಿನ  ಕಣ್ಣಿಟ್ಟು, ಸೇನೆಯ ಮೂರೂ ಪಡೆಗಳಿಗೆ ಚಿತ್ರ ಸಹಿತ ಮಾಹಿತಿ ರವಾನಿಸುವ ಕೆಲಸವನ್ನು ಇದು ಮಾಡಲಿದೆ. ಹೆರೋನ್ ಮಾನವರಹಿತ ವಾಯು ವಾಹಕಗಳ ಬದಲಿಗೆ ರುಸ್ತುಂ ನ್ನು ಬಳಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT