ಬೆಂಗಳೂರಿನಲ್ಲಿ ಎನ್ಎಎಲ್ ಸೌಲಭ್ಯ ಉದ್ಘಾಟಿಸಿದ ಕೇಂದ್ರ ಸಚಿವ ಹರ್ಷವರ್ಧನ 
ರಾಜ್ಯ

2022ರ ವೇಳೆಗೆ ಭಾರತದಲ್ಲಿ 175 ಗಿಗಾವಾಟ್ ಶುದ್ಧ ಇಂಧನ ಉತ್ಪಾದಿಸುವ ಗುರಿ: ಸಚಿವ ಹರ್ಷವರ್ಧನ್ 

2022ರ ಹೊತ್ತಿಗೆ ಭಾರತ 175 ಗಿಗಾವಾಟ್ ಶುದ್ಧ ಇಂಧನವನ್ನು ಉತ್ಪಾದಿಸುವ ಗುರಿ ಹೊಂದಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಹರ್ಷವರ್ಧನ್ ಹೇಳಿದ್ದಾರೆ. 

ಬೆಂಗಳೂರು: 2022ರ ಹೊತ್ತಿಗೆ ಭಾರತ 175 ಗಿಗಾವಾಟ್ ಶುದ್ಧ ಇಂಧನವನ್ನು ಉತ್ಪಾದಿಸುವ ಗುರಿ ಹೊಂದಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಹರ್ಷವರ್ಧನ್ ಹೇಳಿದ್ದಾರೆ.


2022ರ ವೇಳೆಗೆ ನಮ್ಮ ದೇಶದಲ್ಲಿ ಕನಿಷ್ಠ 175 ಗಿಗಾವಾಟ್ ನಷ್ಟು ಶುದ್ಧ ಇಂಧನ ಉತ್ಪಾದಿಸುವ ಗುರಿಯನ್ನಿಟ್ಟುಕೊಳ್ಳಬೇಕು, ಅವುಗಳಲ್ಲಿ 100 ಗಿಗಾವಾಟ್ ಇಂಧನವನ್ನು ಸೂರ್ಯನ ಬೆಳಕು ಮತ್ತು ಬೇರೆ ಮೂಲಗಳಿಂದ ಉತ್ಪಾದಿಸಬೇಕೆಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಎಂದರು. 


ನಿನ್ನೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಅಂತರಶಿಕ್ಷಣ ಇಂಧನ ಸಂಶೋಧನೆ ಕೇಂದ್ರ(ಎನ್ಐಸಿಇಆರ್) ಮತ್ತು ಬೆಂಗಳೂರಿನ ರಾಷ್ಟ್ರೀಯ ವಿಜ್ಞಾನ ಕೇಂದ್ರದಲ್ಲಿ(ಐಐಎಸ್ಸಿ) ರಾಷ್ಟ್ರೀಯ ಶುದ್ಧ ಕಲ್ಲಿದ್ದಲು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ(ಎನ್ ಸಿಸಿಆರ್ ಡಿಸಿ)ವನ್ನು ಉದ್ಘಾಟಿಸಿ ಮಾತನಾಡಿದರು.


ಇಂಧನ ತಯಾರಿಕೆಯಲ್ಲಿ ನಾವು ಉತ್ತಮ ಪ್ರಗತಿ ಸಾಧಿಸುತ್ತಿದ್ದೇವೆ. ಹಸಿರುಮನೆ ಪರಿಣಾಮ, ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಸಮಸ್ಯೆಯಿಂದ ನಾವು ಹೊರಬರಬೇಕಾಗಿದೆ. ಇದುವರೆಗೆ ದೇಶದಲ್ಲಿ ಈ ಸಮಸ್ಯೆಗಳನ್ನು ಶೇಕಡಾ 21ರಷ್ಟು ತಗ್ಗಿಸಲು ಸಾಧ್ಯವಾಗಿದ್ದು ಅದು ಮುಂದಿನ ದಿನಗಳಲ್ಲಿ ಶೇಕಡಾ 33ರಿಂದ ಶೇಕಡಾ 35ರಷ್ಟಾಗಬೇಕು.


ಎನ್ ಸಿಸಿಆರ್ ಡಿ ಬೆಂಗಳೂರಿನ ಐಐಎಸ್ಸಿ ಕೇಂದ್ರದಲ್ಲಿ 37 ಕೋಟಿ ರೂಪಾಯಿ ಹಣ ಹೂಡಿಕೆಯೊಂದಿಗೆ ಸ್ಥಾಪಿಸಲಾಗಿದ್ದು ಈ ಮೂಲಕ ಆಟೋಮೋಟಿವ್, ಧರ್ಮಲ್ ಏರೋಸ್ಪೇಸ್ ಮತ್ತು ಅಗ್ನಿಶಾಮಕ ಸಂಶೋಧನೆಗಳಂತಹ ಕೆಲಸಗಳು ನಡೆಯಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT