ತೇಜಸ್‌ 
ರಾಜ್ಯ

ಸೆ. 19ರಂದು ತೇಜಸ್‌ನಲ್ಲಿ ರಕ್ಷಣ ಸಚಿವ ರಾಜನಾಥ್ ಸಿಂಗ್ ಹಾರಾಟ

ಬೆಂಗಳೂರಿನಲ್ಲಿ ದೇಶಿಯವಾಗಿ ಅಭಿವೃದ್ದಿಪಡಿಸಿರುವ ಲಘು ಸಮರ ವಿಮಾನ (ಎಲ್‌ಸಿಎ) ತೇಜಸ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದೇ 19 ರಂದು (ಗುರುವಾರ) ಹಾರಾಟ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ಹೇಳಿವೆ.

ಬೆಂಗಳೂರು: ಬೆಂಗಳೂರಿನಲ್ಲಿ ದೇಶಿಯವಾಗಿ ಅಭಿವೃದ್ದಿಪಡಿಸಿರುವ ಲಘು ಸಮರ ವಿಮಾನ (ಎಲ್‌ಸಿಎ) ತೇಜಸ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದೇ 19 ರಂದು (ಗುರುವಾರ) ಹಾರಾಟ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ಹೇಳಿವೆ.

ರಕ್ಷಣಾ ಸಚಿವರೊಬ್ಬರು ಇದೇ ಮೊದಲ ಬಾರಿಗೆ ಸಂಪೂರ್ಣ ದೇಶಿ ನಿರ್ಮಿತ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುತ್ತಿದ್ದಾರೆ.

ತೇಜಸ್ ನಾಲ್ಕುವರೆ ತಲೆಮಾರಿನ ಲಘು ಸಮರ ವಿಮಾನವಾಗಿದ್ದು, ಇದನ್ನು ಸರ್ಕಾರಿ ಏರೋಸ್ಪೇಸ್ ಬೆಹೆಮೊಥ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅಭಿವೃದ್ಧಿಪಡಿಸಿದೆ. ಕಳೆದ ಶುಕ್ರವಾರ ಗೋವಾದಲ್ಲಿ ಇದರ ನಿರ್ಣಾಯಕ ಪರೀಕ್ಷೆ ನಡೆಸಲಾಗಿತ್ತು ಇದು ವಿಮಾನವಾಹಕ ನೌಕೆಯಿಂದ ತೇಜಸ್ ತನ್ನ ಕಾರ್ಯಾಚರಣೆ ನಡೆಸಲು ಕೇವಲ ಇನ್ನು ಒಂದು ಹೆಜ್ಜೆಯಷ್ಟೇ ಮಾತ್ರ ಬಾಕಿಯಿದೆ.

ಭಾರತೀಯ ನೌಕಾಪಡೆಗಾಗಿಯೇ ಇದನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ತೇಜಸ್ ಯುದ್ಧ ವಿಮಾನ ತಯಾರಿಕಾ ಸರಣಿಯ ಒಂದು ಭಾಗವಾಗಿದೆ.ಯಶಸ್ವಿಯಾಗಿ ಕಾರ್ಯಗತಗೊಳಿಸುವ ಮೂಲಕ ಭಾರತೀಯ ನೌಕೆ ವಿಕ್ರಮಾದಿತ್ಯದಲ್ಲಿ ತೇಜಸ್ ಸಮರ ವಿಮಾನ ಮುಂದಿನ ಕಾರ್ಯಾಚರಣೆ ನಡೆಸಲು ಈ ಮೂಲಕ ಹಾದಿ ಸುಗಮವಾಗಲಿದೆ ಎಂದೂ ಇಲಾಖೆ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT