ಯಡಿಯೂರಪ್ಪ 
ರಾಜ್ಯ

ವಿಜಯನಗರವನ್ನು ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂ‌ಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂ‌ಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್, ವಿಜಯನಗರವನ್ನು ಜಿಲ್ಲೆ ಮಾಡಬೇಕು ಎನ್ನುವುದು ಅಲ್ಲಿನ‌ ಜನಪ್ರತಿನಿಧಿಗಳ ಹಾಗೂ ಅಲ್ಲಿನ ಜನರ ಬೇಡಿಕೆಯಾಗಿದೆ. ಹಾಗಾಗಿ ಇಂದು ‌ನಡೆಯುವ ಕ್ಯಾಬಿನೆಟ್‌ನಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ‌ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದರು. 

ಅಲ್ಲಂ ವಿರಭದ್ರಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಒಂದು ವಿಶ್ವದಲ್ಲಿ ಹೆಸರು ವಾಸಿಯಾಗಿರುವ ನಗರವಾಗಿದೆ. ಯುನೆಸ್ಕೋ ಇದನ್ನು ಪರಿಗಣಿಸಿದೆ. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಿದರೆ ಆಡಳಿತಾತ್ಮಕವಾಗಿ ತುಂಬ ಅನುಕೂಲವಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಉಜ್ಜಯಿನಿ ಸದ್ಗುರುಗಳು‌ ಮಾತನಾಡಿ, ವಿಜಯನಗರದ ಗತ ವೈಭವ ಮರು ಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರೆಗೆ ಪ್ರೇರಣೆ ಸಿಕ್ಕಿರುವುದೇ ವಿಜಯನಗರ ಸಾಮ್ರಾಜ್ಯ. ಹಾಗಾಗಿ, ಈ ನೆಲಕ್ಕೆ ತನ್ನದೇ ಆದ ವಿಶೇಷ ಗುಣಗಳು ಇವೆ. ಹಾಗಾಗಿ ಇದನ್ನು ಜಿಲ್ಲೆಯ ನ್ನಾಗಿ ಮಾಡಬೇಕು ಎಂದು ಮನವಿ‌ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT