ತೇಜಸ್ ಯುದ್ಧ ವಿಮಾನ ಚಲಾಯಿಸಿದ ರಾಜನಾಥ್ ಸಿಂಗ್ (ಚಿತ್ರ: ನಾಗರಾಜ್ ಗಡೇಕಲ್) 
ರಾಜ್ಯ

ತೇಜಸ್ ಯುದ್ಧ ವಿಮಾನದ ಹಾರಾಟ ರೋಮಾಂಚಕ: ರಾಜನಾಥ್ ಸಿಂಗ್

ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಖ್ಯಾತಿ ಪಡೆದ ರಾಜನಾಥ್ ಸಿಂಗ್ ಅವರು ತೇಜಸ್ ಯುದ್ಧ ವಿಮಾನದಲ್ಲಿನ ಹಾರಾಟ ರೋಮಾಂಚಕವಾಗಿತ್ತು ಎಂದು ಹೇಳಿದ್ದಾರೆ.

ಬೆಂಗಳೂರು: ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಖ್ಯಾತಿ ಪಡೆದ ರಾಜನಾಥ್ ಸಿಂಗ್ ಅವರು ತೇಜಸ್ ಯುದ್ಧ ವಿಮಾನದಲ್ಲಿನ ಹಾರಾಟ ರೋಮಾಂಚಕವಾಗಿತ್ತು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಏರ್ ವೈಸ್ ಮಾರ್ಷಲ್ ಎನ್ ತಿವಾರಿ ಅವರೊಂದಿಗೆ ತೇಜಸ್ ಲಘು ಯುದ್ಧವಿಮಾನದಲ್ಲಿ ಸುಮಾರು 30 ನಿಮಿಷ ಹಾರಾಟ ನಡೆಸಿದ ರಾಜನಾಥ್ ಸಿಂಗ್ ಅವರು ಬಳಿಕ ತಮ್ಮ ಹಾರಾಟದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡರು. 

ಈ ವೇಳೆ ತೇಜಸ್ ಯುದ್ಧ ವಿಮಾನ ದೇಶೀಯ ನಿರ್ಮಿತ ಲಘು ಯುದ್ಧ ವಿಮಾನವಾಗಿದ್ದು, ಇದೇ ಕಾರಣಕ್ಕೆ ಅದರಲ್ಲಿ ಹಾರಾಟ ನಡೆಸಿ ಅನುಭವ ಪಡೆಯಬೇಕು ಎಂದೆನಿಸಿತ್ತು. ಹೀಗಾಗಿ ಇಂದು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದೆ, ನಿಜಕ್ಕೂ ಹಾರಾಟದ ಅನುಭವ ರೋಮಾಂಚಕವಾಗಿತ್ತು. ಎಚ್ ಎಎಲ್ ನ ನಿರ್ಮಾಣ ಅದ್ಭುತ ಎಂದು ಶ್ಲಾಘಿಸಿದರು. ಅಂತೆಯೇ ಡಿಆರ್ ಡಿಒ ಮತ್ತು ತೇಜಸ್ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲ ಎಂಜಿನಿಯರ್ ಗಳಿಗೂ ಧನ್ಯವಾದ. ಇಂತಹ ಯುದ್ಧ ವಿಮಾನ ತಯಾರಿಸುವ ಸಾಮರ್ಥ್ಯ ಈಗ ಭಾರತಕ್ಕೂ ಇದೆ ಎಂದು ತೋರಿಸಿಕೊಟ್ಟಿದ್ದಾರೆ. ಈಗ ನಾವು ತೇಜಸ್ ಯುದ್ಧ ವಿಮಾನವನ್ನು ಬೇರೆ ದೇಶಗಳಿಗೆ ರಫ್ತು ಮಾಡಬಹುದು ಎಂದು ಹೇಳಿದರು. 

ಹಾರಾಟ ಅನುಭವ ಕುರಿತು ಮಾತನಾಡಿದ ರಾಜನಾಥ್ ಸಿಂಗ್, ಯುದ್ಧ ವಿಮಾನದಲ್ಲಿನ ಹಾರಾಟ ತುಂಬಾ ಆರಾಮಾದಾಯಕವಾಗಿತ್ತು. ನನ್ನ ಜೀವನದಲ್ಲೇ ಕೆಲ ಅತ್ಯಮೂಲ್ಯ ಕ್ಷಣಗಳಲ್ಲಿ ಇದೂ ಒಂದಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT