ಸಾಂದರ್ಭಿಕ ಚಿತ್ರಗಳು 
ರಾಜ್ಯ

ಫೋಟೋ ಹಂಚಿಕೊಂಡ ಪ್ರಿಯತಮ, ಮನನೊಂದು ಪ್ರೇಯಸಿ ಆತ್ಮಹತ್ಯೆ

ಪ್ರೇಮಿಯೊಬ್ಬ ತನ್ನ ಪ್ರೇಯಸಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪರಿಣಾಮ ಮನನೊಂದ ಪ್ರೇಯಸಿ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ : ಪ್ರೇಮಿಯೊಬ್ಬ ತನ್ನ ಪ್ರೇಯಸಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪರಿಣಾಮ ಮನನೊಂದ ಪ್ರೇಯಸಿ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಬೂದಿಹಾಳದ ಪಿ.ಎಚ್. ಗ್ರಾಮದ 23 ವರ್ಷದ ಸುಧಾರಾಣಿ ಬಿರಾದಾರ, ಸೀಮೆ ಎಣ್ಣೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಿಯುಸಿಯಿಂದ ಸುಧಾರಾಣಿ ಹಾಗೂ ಕೆರೂಟಗಿ ಗ್ರಾಮದ ಶಿವಾನಂದ ನಡುವೆ ಪರಿಚಯವಾಗಿತ್ತು. ನಂತರ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ, ಅನೇಕ ಫೋಟೋ ಕ್ಲಿಕಿಸಿಕೊಂಡಿದ್ದರು. ಕೆಲವು ದಿನಗಳ ನಂತರ, ಸುಧಾರಾಣಿ ಶಿವಾನಂದ ಬಿರಾದಾರನನ್ನು ಮದುವೆಯಾಗಲು ನಿರಾಕರಿಸಿದಳು. ಇದರಿಂದ ಆಕ್ರೋಶಗೊಂಡ ಶಿವಾನಂದ, ಸುಧಾರಾಣಿ ಜೊತೆ ತೆಗೆಸಿಕೊಂಡಿದ್ದ ಸೆಲ್ಫೀ  ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಅಪಲೋಡ್‌ ಮಾಡಿದ್ದ.

ಇದನ್ನು ನೋಡಿದ ಸುಧಾರಾಣಿ ತನ್ನ ಪ್ರೀತಿಯ ವಿಚಾರ ಎಲ್ಲೆಡೆ ಪ್ರಚಾರವಾಯಿತು ಎಂದು ಮನನೊಂದು ಸೆ.17ರಂದು ಸೀಮೆ ಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆಕೆಯನ್ನು ತಕ್ಷಣವೇ ಸಿಂದಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ನೀಲಮ್ಮ ನೀಲಕಂಟ ಬಿರಾದಾರ, ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT